ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಪಡೆದು ವಾಪಸ್ ಬರ್ತಿದ್ದ ಐವರ ದುರ್ಮರಣ

ಕಲಬುರಗಿ: ನಿಂತಿದ್ದ ಲಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ.

ಸಂಜೀವ್‍ಕುಮಾರ್ ಚಡಚಣ (29), ರಾಣಿ ಚಡಚಣ (26), ಭಾಗ್ಯಶ್ರೀ ಅಳ್ಳಗಿ (22), ಶ್ರೇಯಸ್ ಚಡಚಣ (3) ಮತ್ತು ಧನ್‍ರಾಜ್ (2) ಮೃತ ದುರ್ದೈವಿಗಳು. ಸೋಮವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರೆಲ್ಲರೂ ಮಹಾರಾಷ್ಟ್ರದ ಸೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ.

ಎಲ್ಲರೂ ಒಟ್ಟಾಗಿ ಕಾರಿನಲ್ಲಿ ತಿರುಪತಿ ವೆಂಕಟರಮಣನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಸೊಲ್ಲಾಪುರಕ್ಕೆ ತೆರಳುತ್ತಿದ್ದರು. ಆಗ ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ಮೂವರಿಗೆ ಗಂಭೀರವಾಗಿ ಗಾಯಗಳಾಗಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Comments

Leave a Reply

Your email address will not be published. Required fields are marked *