ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಪಾಟೀಲ್ ವಿರುದ್ಧ ದೂರು ದಾಖಲು

ಬೀದರ್: ಹುಮನಾಬಾದ್‍ನ ಹಾಲಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ.

ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪದಡಿ ಎಫ್‍ಐಆರ್ ದಾಖಲಾಗಿದ್ದು, ಬಿಜೆಪಿ ಕಾರ್ಯಕರ್ತ ಶ್ರೀನಿವಾಸರೆಡ್ಡಿ, ಪಾಟೀಲ್ ವಿರುದ್ಧ ದೂರು ನೀಡಿದ್ದಾರೆ.

ಇದೇ ತಿಂಗಳು 12 ರಂದು ಮತದಾನ ವೇಳೆ ಮತಗಟ್ಟೆ-94 ರಲ್ಲಿ ಶ್ರೀನಿವಾಸರೆಡ್ಡಿ ಬಿಜೆಪಿ ಏಜೆಂಟಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಪಾಟೀಲ್, ಶ್ರೀನಿವಾಸ ರೆಡ್ಡಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹನುಮಂತವಾಡಿಯಲ್ಲಿ ನಡೆದಿದ್ದು, ಸದ್ಯ ಪ್ರಕರಣ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *