ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಡಬದಲ್ಲಿ ಕಳೆದ ಭಾನುವಾರ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಮೇಶ್ ಕಲ್ಪುರೆ ಅವರಿಗೆ ತಂಡವೊಂದು ಗಂಭೀರ ಹಲ್ಲೆ ನಡೆಸಿರುವ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗಿದೆ.
ಹೌದು, ರಮೇಶ್ ಕಲ್ಪುರೆ ಅವರು ಸಾಮಗ್ರಿ ಖರೀದಿಸಿ ತಮ್ಮ ಜೀಪಿನಲ್ಲಿ ತುಂಬುತ್ತಿದ್ದ ವೇಳೆ ಏಕಾಏಕಿ ಅವರ ಮೇಲೆ ತಂಡವೊಂದು ಬಂದು ಯದ್ವಾತದ್ವಾ ಹಲ್ಲೆ ನಡೆಸಿತ್ತು. ಇದು ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿತ್ತು.
ಈ ವೇಳೆ ಅಲ್ಲಿದ್ದ ಸ್ಥಳೀಯರು ಜಮಾಯಿಸಿ ಆರೋಪಿಗಳನ್ನು ಹಿಡಿದು ಪಲೀಸರಿಗೆ ಒಪ್ಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಾದ ಪ್ರಕಾಶ, ಟಿನ್ಸನ್, ಸನೂಷ್, ಲಿಜೋ, ಸಂತೋಷ್ ಎಂಬವರನ್ನು ಬಂಧಿಸಿದ್ದರು.
https://www.youtube.com/watch?v=tnymLyoHm8M



Leave a Reply