ಕೇಂದ್ರ ಸಚಿವ ಅನಂತ್ ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದು

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್‍ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದಾಗಿದೆ.

ಶನಿವಾರ ಮೈಸೂರಿನ ವರುಣಾ, ಕೃಷ್ಣರಾಜ, ಚಾಮರಾಜ ಕ್ಷೇತ್ರಗಳಿಗೆ ಭೇಟಿ ನೀಡಿ ಅನಂತ್‍ಕುಮಾರ್ ಪ್ರಚಾರ ನಡೆಸಬೇಕಿತ್ತು. ಅಷ್ಟೇ ಅಲ್ಲದೇ ಮಧ್ಯಾಹ್ನ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು.

ಆದರೆ ಈಗ ನಾಳಿನ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡುವಂತೆ ಅನಂತ್ ಕುಮಾರ್ ಸೂಚನೆ ನೀಡಿದ್ದಾರೆ. ಕಾರ್ಯಕ್ರಮ ರದ್ದಾಗಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ.

ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಲು ಅನಂತ್ ಕುಮಾರ್ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ವಿಜಯೇಂದ್ರ ಅಭಿಮಾನಿಗಳು ಅನಂತ್ ಕುಮಾರ್ ಅವರಿಂದಲೇ ಟಿಕೆಟ್ ಕೈ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಸ್ತುತ ಈಗ ವಿಜಯೇಂದ್ರ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಪ್ರಚಾರದ ಸಮಯದಲ್ಲಿ ಸ್ವಪಕ್ಷೀಯರಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಕಾರಣ ಅನಂತ್ ಕುಮಾರ್ ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

Comments

Leave a Reply

Your email address will not be published. Required fields are marked *