ಚಾಲೆಂಜಿಂಗ್ ಸ್ಟಾರ್ ಗೆ ಅಭಿಮಾನಿಯಿಂದ ಅಪರೂಪದ ಉಡುಗೊರೆ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವೀಕೆಂಡ್‍ನಲ್ಲಿ ತಮ್ಮ ಫಾರ್ಮ್ ಹೌಸ್‍ನಲ್ಲಿ ದಿನ ಕಳೆಯುತ್ತಾರೆ. ಆದರೆ ಈ ಭಾನುವಾರ ದರ್ಶನ್ ಕಡಲ ನಾಡು ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಏರ್ಪಡಿಸಲಾಗಿದ್ದ ಯಕ್ಷ ಧ್ರುವ ಪಟ್ಲ ಕಾರ್ಯಕ್ರಮಕ್ಕೆ ದರ್ಶನ್ ನಿಗದಿತ ಸಮಯಕ್ಕಿಂತ ಮೂರು ಗಂಟೆ ತಡವಾಗಿ ಹೋಗಿದ್ದರು. ಆದರೂ ದರ್ಶನ್ ಅವರನ್ನು ನೋಡಲು ಸಾವಿರಾರು ಮಂದಿ ಕಾದು ಕುಳಿತಿದ್ದರು.

ಚಾಲೆಂಜಿಂಗ್ ಸ್ಟಾರ್ ಬರುವುದ್ದನ್ನು ತಿಳಿದ ಸಾವಿರಾರು ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಬರಮಾಡಿಕೊಂಡರು. ನಂತರ ದರ್ಶನ್ ಬರುತ್ತಿದ್ದಂತೆ ಅಭಿಮಾನಿಗಳು ಅವರ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದಿದ್ದರು.

ದರ್ಶನ್ ಅವರು ಹೋಗಿ ಬರುವ ಜಾಗಗಳಲ್ಲಿ ಅವರ ಅಭಿಮಾನಿಗಳು ಅವರಿಗಾಗಿ ಉಡುಗೊರೆಯನ್ನು ನೀಡುತ್ತಾರೆ. ಆದರೆ ಮಂಗಳೂರಿನಲ್ಲಿ ಅಭಿಮಾನಿಯೊಬ್ಬರು ದರ್ಶನ್ ಅವರಿಗೆ ವಿಶೇಷವಾದ ಉಡುಗೊರೆಯನ್ನು ನೀಡಿದ್ದಾರೆ.

ಅಭಿಮಾನಿ ತನ್ನ ನೆಚ್ಚಿನ ನಟ ದರ್ಶನ್‍ಗೆ ವ್ಯಂಗ್ಯ ಚಿತ್ರವಿರುವ ಒಂದು ಫೋಟೋವನ್ನು ಉಡುಗೊರೆಯಾಗಿ ನೀಡಿದ್ದಾರೆ. ದರ್ಶನ್ ಅವರಿಗೆ ಸಿಕ್ಕ ಈ ವಿಶೇಷವಾದ ಉಡುಗೊರೆಯನ್ನು ನೋಡಿ ಅವರ ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ. ಕಾರ್ಟೂನ್ ಫೋಟೋ ನೋಡಿದ ದರ್ಶನ್ ಅಭಿಮಾನಿಗಳು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಈ ಹಿಂದೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕಾಗಿ ಕರಾವಳಿಗೆ ಹೋಗಿದ್ದರು. ಮಂಗಳೂರಿಗರ ಪ್ರೀತಿಗೆ ಕರಗಿದ ದರ್ಶನ್ ಇದೀಗ ಮತ್ತೊಮ್ಮೆ ಇನ್ನೊಂದು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷವಾಗಿತ್ತು.

Comments

Leave a Reply

Your email address will not be published. Required fields are marked *