ತೋಟದ ಮನೆಯಲ್ಲಿ ರಾಸುಗಳ ಕಿಚ್ಚು ಹಾಯಿಸಿ ಸಂಕ್ರಾಂತಿ ಸಂಭ್ರಮಿಸಿದ ಡಿಬಾಸ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ತೋಟದ ಮನೆಯಲ್ಲಿ ರಾಸುಗಳ ಕಿಚ್ಚು ಹಾಯಿಸಿ ಸಂಕ್ರಾಂತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಡಿಬಾಸ್ ದರ್ಶನ್ ಅವರು ಮೈಸೂರಿನ ಟಿ.ನರಸೀಪುರದ ರಸ್ತೆಯಲ್ಲಿರುವ ತಮ್ಮ ತೂಗುದೀಪ ಫಾರಂನಲ್ಲಿ ಆಪ್ತರು ಹಾಗೂ ಗೆಳೆಯರೊಂದಿಗೆ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ತೋಟದ ಮನೆಯಲ್ಲಿರುವ ದನಗಳ ಜೊತೆ ತಮ್ಮಿಷ್ಟದ ಕುದುರೆಗಳನ್ನು ಕಿಚ್ಚು ಹಾಯಿಸಿ ಸಂಕ್ರಾಂತಿಯನ್ನು ಸಂಭ್ರಮಿಸಿದ್ದಾರೆ.

https://twitter.com/DBossFc171/status/1217458422993440768

ನಟ ದರ್ಶನ್ ಅವರು ತಮ್ಮಿಷ್ಟದ ಬಿಳಿ ಕುದುರೆಯನ್ನು ಹಿಡಿದು ಕಿಚ್ಚು ಹಾಯಿಸುತ್ತಿರುವ ಫೋಟೋ ಹಾಗೂ ವಿಡಿಯೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ರಾಬರ್ಟ್’ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, `ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ’ ಎಂದು ಬರೆದುಕೊಂಡಿದ್ದರು.

ರಿಲೀಸ್ ಆಗಿರುವ ಲುಕ್ ಮೋಷನ್ ಪೋಸ್ಟರ್ 53 ಸೆಕೆಂಡ್‍ಗಳಿದ್ದು, ಅದ್ಭುತವಾಗಿ ಮೂಡಿ ಬಂದಿದೆ. ದರ್ಶನ್ ಆಂಜನೇಯ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಹೆಗಲ ಮೇಲೆ ರಾಮನ ಪಾತ್ರದ ಮಗುವನ್ನು ಕೂರಿಸಿಕೊಂಡಿದ್ದಾರೆ. ಪುಟ್ಟ ರಾಮ ರಾವಣ ನ ಪ್ರತಿಕೃತಿಯನ್ನು ದಹಿಸಲು ಬಿಲ್ಲು ಹಿಡಿದಿರುವುದನ್ನು ಕಾಣಬಹುದಾಗಿದೆ.

ಕುರುಕ್ಷೇತ್ರದಲ್ಲಿ ದುರ್ಯೋಧನನಾಗಿ ನೋಡಿದ್ದ ಅಭಿಮಾನಿಗಳು `ರಾಬರ್ಟ್’ ಸಿನಿಮಾದಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ರಿಲೀಸ್ ಆಗಿರುವ ಎರಡನೇ ಪೋಸ್ಟರ್ ಸಿನಿಮಾದ ಮೇಲಿನ ಕೂತುಹಲವನ್ನು ಮತ್ತುಷ್ಟು ಹೆಚ್ಚಿಸಿದೆ.

Comments

Leave a Reply

Your email address will not be published. Required fields are marked *