ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ: ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದ್ವೇಷ ತೀರಿಸಿಕೊಳ್ಳುವ ಅಗತ್ಯವಿಲ್ಲ – ಕರ್ಮದ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಮಾತು

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರ ಅಭಿಮಾನಿಗಳು ‘ಪೈಲ್ವಾನ್’ ಸಿನಿಮಾವನ್ನು ಪೈರಸಿ ಮಾಡಿದ್ದಾರೆ ಎಂದು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಆರೋಪಿಸುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳು ನಡುವೆ ಆರೋಪ- ಪ್ರತ್ಯಾರೋಪ ಕೇಳಿ ಬರುತಿತ್ತು.

ಸೋಮವಾರ ಪೈಲ್ವಾನ್ ಚಿತ್ರ ಪೈರಸಿಯಾಗಿದೆ ಎಂದು ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚಿತ್ರ ಪೈರಸಿ ಆಗಿದೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಸುಮಾರು 3500ಕ್ಕೂ ಹೆಚ್ಚು ಲಿಂಕ್‍ಗಳ ಬಗ್ಗೆ ಪೊಲೀಸರಿಗೆ ತಿಳಿಸಿದ್ದೇವೆ. ದರ್ಶನ್ ಅವರ ಅಭಿಮಾನಿಗಳು ಈ ಸಿನಿಮಾವನ್ನು ಪೈರಸಿ ಮಾಡಿಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ತಿಳಿಸಿ ಎಲ್ಲ ಚರ್ಚೆಗಳಿಗೆ ತೆರೆ ಎಳೆದಿದ್ದರು.

Comments

Leave a Reply

Your email address will not be published. Required fields are marked *