ಬೆಂಕಿ ನಂದಿಸಲು ಹೋದ ರೈತ ಅಗ್ನಿಗಾಹುತಿ

ಚಾಮರಾಜನಗರ: ಬೆಂಕಿ ನಂದಿಸಲು ಹೋದ ರೈತ ಅಗ್ನಿಗೆ ಆಹುತಿಯಾಗಿ ಸಾವನ್ನಪ್ಪಿದ ಘಟನೆ ನಡೆದಿದೆ ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ಸ್ವಾಮಿ ಬೆಂಕಿಗೆ ಆಹುತಿಯಾದ ಮೃತ ರೈತ. ಕಬ್ಬಿನ ತರಗಿಗೆ ಬೆಂಕಿ ಹಚ್ಚಲು ತೆರಳಿದ್ದ ಮಲ್ಲಿಕಾರ್ಜುನ ಸ್ವಾಮಿ, ಪಕ್ಕದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರಿಸಲು ಮುಂದಾಗಿದ್ದಾನೆ. ಬೆಂಕಿ ಆರಿಸುವ ಪ್ರಯತ್ನದಲ್ಲಿ ಕಬ್ಬಿನ ಗದ್ದೆಯಲ್ಲಿ ಸಿಲುಕಿ ರೈತ ಮಲ್ಲಿಕಾರ್ಜುನ ಸ್ವಾಮಿ ಪ್ರಾಣ ಬಿಟ್ಟಿದ್ದಾನೆ.

ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಕಿ ಆರಿಸುವ ಪ್ರಯತ್ನದಲ್ಲಿ ಪ್ರಾಣ ಬಿಟ್ಟ ರೈತನ ಮನೆಯಲ್ಲಿ ಶೋಕ ಮಡುಗಟ್ಟಿದೆ.

Comments

Leave a Reply

Your email address will not be published. Required fields are marked *