ಸ್ನೇಹಿತರ ಮುಂದೆ ಜಲಸಮಾಧಿಯಾದ ಬೆಂಗಳೂರಿನ ಯುವಕ

ಚಾಮರಾಜನಗರ: ಸ್ನೇಹಿತರ ದಿನದೊಂದು ಗೆಳಯರ ಜೊತೆಗೆ ಮಲೆಮಾದಪ್ಪನ ದರ್ಶನಕ್ಕೆ ಬಂದಿದ್ದ ಯುವಕನೊರ್ವ ನೀರಿನಲ್ಲಿ ಮುಳುಗಿ ಜಲ ಸಮಾಧಿಯಾದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿನ ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದಾಗ ಬೆಂಗಳೂರಿನ ನಿವಾಸಿಯಾದ ಪ್ರಭು (28) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ 9 ಜನ ಸ್ನೇಹಿತರು ಪ್ರವಾಸಕ್ಕೆಂದು ಆಗಮಿಸಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪ್ರವಾಸಕ್ಕೆ ಹೋಗಿದ್ದವರ ಪೈಕಿ ಪ್ರಭುವಿಗೆ ಮಾತ್ರ ಈಜು ಬರುತಿತ್ತು ಎಂದು ತಿಳಿದುಬಂದಿದೆ. ಅಲ್ಲಿದ್ದ ಬೇರೆ ಯಾವ ಗೆಳೆಯರಿಗೂ ಈಜು ಬಾರದ ಹಿನ್ನೆಲೆಯಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲಾಗದೇ ಕೂಗಾಡಿ ಕೊನೆಗೆ ಪೋಲಿಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಯುವಕನ ಶೋಧಕಾರ್ಯವನ್ನು ಮಲೆಮಹದೇಶ್ವರ ಬೆಟ್ಟದ ಪೊಲೀಸರು ಮುಂದುವರಿಸಿದ್ದಾರೆ.

Comments

Leave a Reply

Your email address will not be published. Required fields are marked *