ಈಜಲು ತೆರಳಿದ್ದ ವಿದ್ಯಾರ್ಥಿ ನೀರು ಪಾಲು

ಚಾಮರಾಜನಗರ: ಕೆರೆಯಲ್ಲಿ ಈಜಲು ಹೋಗಿ ಮುಳಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ.

ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕೊರೆಯ ಬಳಿ ಇರುವ ಕೆರೆಯಲ್ಲಿ ಘಟನೆ ನಡೆದಿದ್ದು, ಬೇಗೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಕಿಲ್.ಎನ್ (17) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕಾಲೇಜು ವತಿಯಿಂದ ಅರೇಪುರ ಗ್ರಾಮದಲ್ಲಿ ಎನ್‍ಎಸ್‍ಎಸ್ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಇಂದು ಮಧ್ಯಾಹ್ನ ಊಟ ಮಾಡಿಕೊಂಡು ಪಕ್ಕದಲ್ಲಿಯೇ ಇದ್ದ ಕೆರೆಯಲ್ಲಿ ನಾಲ್ಕು ಜನ ವಿದ್ಯಾರ್ಥಿಗಳ ಜೊತೆಯಲ್ಲಿ ತೆರಳಿ ಕೆರೆಗೆ ಇಳಿದಿದ್ದರು. ಅಕಿಲ್ ಈಜು ಬಾರದೆ ಕೆರೆಯಲ್ಲಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಶವವನ್ನ ಹೊರತೆಗೆದಿದ್ದಾರೆ. ಈ ಸಂಬಂಧ ಬೇಗೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *