ಜೈಲಿನಲ್ಲೂ ಹಗಲು ದರೋಡೆ – ಕೈದಿಗಳನ್ನು ನೋಡಲು ಲಂಚ

ಚಾಮರಾಜನಗರ: ಜಿಲ್ಲೆಯಲ್ಲಿರುವ ಜೈಲಿನಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇಲ್ಲಿನ ಉಪಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳನ್ನು ನೋಡಲು ಹಣ ಕೊಡಲೇಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ಲಂಚಕೊಟ್ಟರೆ ಮಾತ್ರ ಕೈದಿಗಳನ್ನು ನೋಡಲು ಅವಕಾಶ ನೀಡಲಾಗುತ್ತೆ. ಇಲ್ಲಿನ ಜೈಲಧಿಕಾರಿಗಳು ಕೈದಿಗಳ ಸಂಬಂಧಿಕರಿಂದ ಹಣ ವಸೂಲಿ ಮಾಡುತ್ತಾರೆ. ಕೈದಿಗಳ ಸಂಬಂಧಿಕರಿಂದ ಹಣ ವಸೂಲಿ ಮಾಡುವ ದೃಶ್ಯಗಳು ಮೊಬೈಲ್ ಕ್ಯಾಮೆರದಲ್ಲಿ ಸೆರೆಯಾಗಿವೆ.

ಈ ಉಪಕಾರಾಗೃಹದಲ್ಲಿ 125ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು ಪ್ರತಿ ದಿನ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಉಪಕಾರಾಗೃಹದಲ್ಲಿ ಸಿಸಿ.ಕ್ಯಾಮೆರಾಗಳನ್ನು ಅಳವಡಿಸಿದ್ದರೂ ರಾಜಾರೋಷವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಜೈಲ್ ಸೂಪರಿಂಟೆಂಡೆಂಡ್ ವಿಜಯ್ ರೋಡ್ಕರ್ ನಿರಾಕರಿಸಿದ್ದಾರೆ. ತಮಗೇನು ಗೊತ್ತಿಲ್ಲ ಎನ್ನುವ ಹಾರಿಕೆ ಉತ್ತರ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಹೇಳುತ್ತಾರೆ.

Comments

Leave a Reply

Your email address will not be published. Required fields are marked *