ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ.

ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರೊಬ್ಬರು ನಡೆಸಿದ್ದಾರೆ ಎನ್ನಲಾಗುವ ಆಡಿಯೋ ಸಂಭಾಷಣೆಯಲ್ಲಿ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಪಕ್ಷಗಳು ಹಣದ ಹೊಳೆಯನ್ನೇ ಹರಿಸುತ್ತಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಯಾರು ಯಾರಿಗೇ ಹಣ ಕೊಟ್ಟಿದ್ದೇವೆ. ಎಷ್ಟು ಎಷ್ಟು ಹಣ ಕೊಡಲಾಗುತ್ತಿದೆ?. ಯಾರಿಗೆ ಹಣ ನೀಡಲಾಗುತ್ತಿಲ್ಲ ಎನ್ನುವುದರ ಬಗ್ಗೆ ಸ್ವತಃ ಸ್ಥಳೀಯ ಬಿಜೆಪಿ ಮುಖಂಡ ಆಡಿಯೋ ನಲ್ಲಿ ಬಿಚ್ಚಿಟ್ಟಿದ್ದಾರೆ. ಈ ಆಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಚರ್ಚೆಗೆ ಒಳಪಟ್ಟಿದೆ. ಆದ್ರೆ ಈ ಕುರಿತು ಯಾವುದೇ ನಾಯಕರು ಪ್ರತಿಕ್ರಿಯೆಯನ್ನ ನೀಡಿಲ್ಲ.

ಈ ಉಪಚುನಾವಣೆ ಎರಡು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ನಿಂದ ಸುಭಾಷ್ ರಾಥೋಡ್ ಸ್ಪರ್ಧೆ ಮಾಡಿದರೆ, ಬಿಜೆಪಿಯಿಂದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧಾವ್ ಸ್ಪರ್ಧೆಯಲ್ಲಿದ್ದಾರೆ.

Comments

Leave a Reply

Your email address will not be published. Required fields are marked *