ಸೋಮವಾರ ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ

ಬೆಂಗಳೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ನಿವೇದಿತಾ ಗೌಡ ನಿಶ್ವಿತಾರ್ಥ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಕುಟುಂಬದ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ: ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲಿಯೂ ಚಂದನ್ ಮತ್ತು ನಿವೇದಿತಾ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ. ಇದನ್ನೂ ಓದಿ:   ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

ಯುವ ದಸರಾದಲ್ಲಿ ಚಂದನ್ ರಿಂಗ್ ತೊಡಿಸುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಈ ರೀತಿ ಪ್ರೇಮ ನಿವೇದನೆ ಸಲ್ಲಿಸಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

Comments

Leave a Reply

Your email address will not be published. Required fields are marked *