ಸಿಬಿಐಗೆ ಶಾಕ್ ನೀಡಿದ ಚಂದ್ರಬಾಬು ನಾಯ್ಡು

ಹೈದರಾಬಾದ್: ಕೇಂದ್ರ ಸರ್ಕಾರವೂ ರಾಜ್ಯಗಳಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹಿಂತೆಗೆದುಕೊಂಡಿದ್ದು, ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದಾರೆ.

ದೆಹಲಿ ವಿಶೇಷ ಪೊಲೀಸ್ ಸಂಸ್ಥೆಯ ಕಾಯಿದೆ (1946) ಅಡಿಯಲ್ಲಿ ಬರುವ ಸೆಕ್ಷನ್ 6ರ ಅನುಸಾರ ರೂಪಿಸಲಾಗಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಸಿಬಿಐ ಗೆ ನೀಡಿದ್ದ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಆಂಧ್ರ ಪ್ರದೇಶದಲ್ಲಿ ಸಿಬಿಐ ಅಧಿಕಾರಿಗಳು ಇನ್ನು ಮುಂದೆ ಯಾವುದೇ ರೀತಿಯ ತನಿಖೆ, ದಾಳಿ ನಡೆಸಿದರೂ ಅದಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯವುದು ಕಡ್ಡಾಯವಾಗಿದೆ. ಇದರ ಪರಿಣಾಮ ಆಂಧ್ರಪ್ರದೇಶದಲ್ಲಿ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿಯಾದ ಚಂದ್ರಬಾಬು ನಾಯ್ಡು ಅವರು ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ), ಅದಾಯ ತೆರಿಗೆ ಇಲಾಖೆ (ಐಟಿ) ತನಿಖಾಧಿಕಾರಿಗಳು ತಮ್ಮ ಅಧಿಕಾರವನ್ನ ದುರುಪಯೋಗ ಪಡಿಸಿಕೊಂಡು, ತಮ್ಮ ರಾಜಕೀಯ ವೈರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ ಅಧೀನದಲ್ಲಿರುವ ಎಲ್ಲಾ ಪ್ರಕರಣಗಳ ತನಿಖೆಯನನ್ನು ನಡೆಸಲು ಸಿಬಿಐ ಬದಲಾಗಿ ಎಸಿಬಿ (ಭ್ರಷ್ಟಚಾರ ನಿಗ್ರಹ ದಳ)ಗೆ ಜವಾಬ್ದಾರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಆಂಧ್ರ ಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದೇ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ನಡೆಸುವ ದಾಳಿಗಳಿಗೆ ರಾಜ್ಯ ಸರ್ಕಾರವೂ ಯಾವುದೇ ಪೊಲೀಸ್ ಭದ್ರತೆಯನ್ನು ಒದಗಿಸುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *