ಚೆಕ್‍ ಬೌನ್ಸ್ ಕೇಸ್: ಸಚಿವ ಸಂತೋಷ್ ಲಾಡ್‍ಗೆ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್‍ಗೆ ಕಂಟಕ ಎದುರಾಗಿದೆ. ಚೆಕ್‍ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಮ್ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ 42 ಎಸಿಎಂಎಂ ನ್ಯಾಯಾಲಯ ಗುರುವಾರ ಸಂತೋಷ್ ಲಾಡ್‍ಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಮುಂದಿನ ವಿಚಾರಣೆ ಇದೇ ತಿಂಗಳು 22 ರಂದು ನಡೆಯಲಿದ್ದು ಆ ಸಂದರ್ಭದಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

2015 ರಲ್ಲಿ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಸಂತೋಷ್ ಲಾಡ್ ವಿರುದ್ಧ ಉಪ್ಪಾರಪೇಟೆ ಪೋಲೀಸ್‍ಸ್ಟೇಷನ್‍ನಲ್ಲಿ ಎಫ್‍ಐಆರ್ ದಾಖಲಾಗಿತ್ತು.

Comments

Leave a Reply

Your email address will not be published. Required fields are marked *