ಕಾಲೇಜಿನ ಮುಂದೆಯೇ ಬಿಕಾಂ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಚೆನ್ನೈ: ಕಾಲೇಜಿನ ಮುಂಭಾಗವೇ ವಿದ್ಯಾರ್ಥಿನಿಗೆ ಯುವಕನೊಬ್ಬ ಚಾಕುವಿನಿಂದ ಇರಿತು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಎಂ. ಅಶ್ವಿನಿ(19) ಮೃತ ದುರ್ದೈವಿ. ಮೀನಾಕ್ಷಿ ಕಾಲೇಜಿನಲ್ಲಿ ಅಶ್ವಿನಿ ಪ್ರಥಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ಈ ಘಟನೆ ನಡೆದಿದ್ದು, ಆರೋಪಿಯನ್ನು ಅಲಗೇಶನ್ ಎಂದು ಗುರುತಿಸಲಾಗಿದೆ. ಚಾಕು ಇರಿದ ನಂತರ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು, ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ನಡೆದಿದ್ದೇನು?: ಆರೋಪಿ ಅಲಗೇಶನ್ ನೀರಿನ ಬ್ಯುಸಿನೆಸ್ ಮಾಡುತ್ತಿದ್ದನು. ಆರೋಪಿ ಮೊದಲು ಕಾಲೇಜಿನ ಬಳಿ ಬಂದು ಅಶ್ವಿನಿ ಜೊತೆ ಮಾತನಾಡುತ್ತಿದ್ದನು. ನಂತರ ಆಕೆಯನ್ನ ಡ್ರಾಪ್ ಮಾಡುವುದಾಗಿ ಹೇಳಿದ್ದಾನೆ. ಇದಕ್ಕೆ ಅಶ್ವಿನಿ ನಿರಾಕರಿಸಿದ್ದಾಳೆ. ಬಳಿಕ ಇಬ್ಬರ ನಡುವೆ ವಾದ ನಡೆದು ಆರೋಪಿ ಏಕಾಏಕಿ ಚಾಕು ತೆಗೆದು ಆಕೆಗೆ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿಯನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಶ್ವಿನಿ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ. ಮೃತ ಅಶ್ವನಿ ಕೆಕೆ ನಗರದಲ್ಲಿನ ಮೀನಾಕ್ಷಿ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್‍ನಲ್ಲಿ ಓದುತ್ತಿದ್ದಳು.

ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಆರೋಪಿ ಯಾಕೆ ಈ ಕೃತ್ಯ ಎಸಗಿದ್ದಾನೆ ಎಂದು ಇನ್ನು ನಿಖರ ಮಾಹಿತಿ ತಿಳಿದುಬಂದಿಲ್ಲ.

Comments

Leave a Reply

Your email address will not be published. Required fields are marked *