ಐಇಡಿ ಸ್ಫೋಟಿಸಿ ನಕ್ಸಲರ ದಾಳಿ- ಬಿಜೆಪಿ ಶಾಸಕ ಸೇರಿ ಐವರು ಪೊಲೀಸರ ಸಾವು

ರಾಯ್ಪುರ: ಛತ್ತಿಸ್‍ಗಢದ ದಂತೇವಾಡಾದ ಬಳಿ ಬಿಜೆಪಿ ನಾಯಕರು ತೆರೆಳುತ್ತಿದ್ದ ಬೆಂಗಾವಲು ವಾಹನದ ಮೇಲೆ ನಕ್ಸಲರು ಸುಧಾರಿತ ಸ್ಫೋಟಕ ಬಳಸಿ ದಾಳಿ ನಡೆಸಿದ್ದು, ಘಟನೆಯಲ್ಲಿ ಬಿಜೆಪಿ ಶಾಸಕ ಭೀಮಾ ಮಾಂಡವಿ ಸೇರಿದಂತೆ ಐವರು ಪೊಲೀಸರು ಸಾವನ್ನಪ್ಪಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಭೀಮಾ ಅವರು ಪ್ರಚಾರ ಕಾರ್ಯವನ್ನು ನಡೆಸಲು ತೆರಳುತ್ತಿದ್ದ ವೇಳೆ ನಕ್ಸಲರ ದಾಳಿ ನಡೆದಿದೆ. ಸ್ಫೋಟದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ಪೊಲೀಸರು ಮೃತಪಟ್ಟಿದ್ದಾರೆ.

ಬೆಂಗಾವಲು ವಾಹನದ ಜೊತೆ ತೆರಳುತ್ತಿದ್ದ ಕಾರುಗಳ ಕೊನೆ ವಾಹನದಲ್ಲಿ ಶಾಸಕರು ಕುಳಿತ್ತಿದ್ದರು ಎನ್ನಲಾಗಿದ್ದು, ಈ ವಾಹನವನ್ನೇ ನಕ್ಸಲರು ಸ್ಫೋಟಿಸಿದ್ದಾರೆ. ಪರಿಣಾಮ ವಾಹನದಲ್ಲಿದ್ದವರ ದೇಹಗಳು ಛಿದ್ರಗಳು ಸುಮಾರು ದೂರ ಹಾರಿ ಬಿದ್ದಿವೆ. ಸ್ಫೋಟದ ಬಳಿಕ ನಕ್ಸಲರು ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಘಟನೆಯಲ್ಲಿ ಶಾಸಕರು ಸಾವನ್ನಪ್ಪಿದ ಬಗ್ಗೆ ನಕ್ಸಲ್ ನಿಗ್ರಹ ದಳದ ಡಿಐಜಿ ಪಿ ಸುಂದರ್ ರಾಜ್ ಖಚಿತ ಪಡಿಸಿ ಮಾಹಿತಿ ನೀಡಿದ್ದಾರೆ.

ನಕ್ಸಲರ ದಾಳಿಯ ಕುರಿತು ಮಾಹಿತಿ ಲಭಿಸುತ್ತಿದಂತೆ ಸಿಆರ್‍ಪಿಎಫ್ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ಛತ್ತೀಸ್‍ಗಢ ಸಿಎಂ ಭೂಪೇಶ್ ಬಾಗೇಲ್ ಕಠಿಣ ಕ್ರಮಕೈಗೊಳ್ಳುವಂತೆ ಡಿಐಜಿಗೆ ಸೂಚನೆ ನೀಡಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಗುರುವಾರ ಚುನಾವಣೆಯ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 80 ಸಾವಿರ ರಕ್ಷಣಾ ಸಿಬ್ಬಂದಿ, ಡ್ರೋಣ್ ಕ್ಯಾಮೆರಾಗಳನ್ನು ಸರ್ಕಾರ ನಿಯೋಜನೆ ಮಾಡಿದೆ.

Comments

Leave a Reply

Your email address will not be published. Required fields are marked *