ಪಾಟೀಲ ಪುಟ್ಟಪ್ಪರಿಗೆ ಶೀಘ್ರ ಬಸವ ರಾಷ್ಟ್ರೀಯ ಪುರಸ್ಕಾರ- ಸಿಎಂ

– ಪಾಪು ಆರೋಗ್ಯ ವಿಚಾರಿಸಿದ ಸಿಎಂ

ಹುಬ್ಬಳ್ಳಿ: ಹಿರಿಯ ಪತ್ರಕರ್ತ, ರಾಜ್ಯಸಭೆಯ ಮಾಜಿ ಸದಸ್ಯ ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ರಾಜ್ಯ ಸರ್ಕಾರದಿಂದ ಕೊಡಮಾಡುವ 2017ನೇ ಸಾಲಿಗಾಗಿ ಘೋಷಿಸಿದ್ದ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿಯನ್ನು ಶೀಘ್ರದಲ್ಲೇ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಅವರು, ರಾಷ್ಟ್ರೀಯ ಬಸವ ಪುರಸ್ಕಾರದೊಂದಿಗೆ ಹತ್ತು ಲಕ್ಷ ರೂ. ನಗದು ನೀಡಲಾಗುವುದು. ಅಲ್ಲದೆ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಪುಟ್ಟಪ್ಪನವರು ಸದ್ಯ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವದಾಗಿ ಮುಖ್ಯಮಂತ್ರಿ ತಿಳಿಸಿದರು.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕಳೆದ ಫೆ.10ರಿಂದ ಚಿಕಿತ್ಸೆ ಪಡೆಯುತ್ತಿರುವ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖುದ್ದಾಗಿ ಭೇಟಿ ನೀಡಿ ವಿಚಾರಿಸಿದರು. ಇದೇ ವೇಳೆ ಪಾಪು ಕುಟುಂಬಸ್ಥರೊಂದಿಗೆ ಸಮಾಲೋಚನೆ ನಡೆಸಿದರು.

Comments

Leave a Reply

Your email address will not be published. Required fields are marked *