ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಗ್ರಾಹಕ

ಚಿಕ್ಕಬಳ್ಳಾಪುರ: ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ.

ದುರ್ಗೆನಹಳ್ಳಿ ಗ್ರಾಮದ ಕುಮಾರ್ ಎಂಬವ ವ್ಯಕ್ತಿ ಕಾರ್ಪೋರೇಷನ್ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಕ್ಷಣಾರ್ಧದಲ್ಲಿ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾಗಿದ್ದಾರೆ. ತನ್ನ ಖಾತೆಯಲ್ಲಿರುವ 268 ರೂಪಾಯಿಗಳನ್ನು ನೀಡಲೇಬೇಕೆಂದು ಬ್ಯಾಂಕಿನ ಸಿಬ್ಬಂದಿಯನ್ನು ಕೇಳಿದ್ದಾನೆ. ಬ್ಯಾಂಕ್ ಸಿಬ್ಬಂದಿ ಹಣ ನೀಡಲ್ಲ ಎಂದಾಗ ಹಲ್ಲೆಗೆ ಮುಂದಾಗಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕಿನ ಸಿಬ್ಬಂದಿ, ಕಳೆದೊಂದು ವರ್ಷದಿಂದ ಬ್ಯಾಂಕಿನಲ್ಲಿ ವ್ಯವಹಾರ ನಡೆಸದಿರುವ ಕಾರಣ ಅಕೌಂಟ್ ಲಾಕ್ ಆಗಿದೆಯೆಂದು ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಕುಮಾರ ಕೂಡಲೇ ಬ್ಯಾಂಕಿನ ಸಿಬ್ಬಂದಿ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ್ದನೆ. ಇದನ್ನು ಕಂಡ ಬ್ಯಾಂಕಿನಲ್ಲಿದ್ದ ಸ್ಥಳೀಯರು ಕುಮಾರನನ್ನು ಕೂಡಲೇ ಹಿಡಿದು, ಮಚ್ಚನ್ನು ಕಸಿದುಕೊಂಡು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *