ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ – ಸತೀಶ್ ಜಾರಕಿಹೂಳಿ

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ನಾವು ಬೆಂಕಿ ಹಾರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಎಂದೂ ರೆಸಾರ್ಟಿಗೆ ಹೋದವನಲ್ಲ, ಹಾಗಾಗಿ ರೆಸಾರ್ಟಿಗೆ ಹೋಗಲ್ಲ. ನಾನು ನನ್ನ ಊರು ಬೆಳಗಾವಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಅತೃಪ್ತ ಶಾಸಕರು ಯಾರೂ ಬಿಜೆಪಿಯವರಲ್ಲ. ಕಾಂಗ್ರೆಸ್-ಜೆಡಿಎಸ್‍ನ ನಮ್ಮ ಅರ್ಧಕ್ಕೂ ಹೆಚ್ಚು ಶಾಸಕರು ವಾಪಸ್ ಬರುತ್ತಾರೆ. ಸಿಎಂ ಸಹ ಸಚಿವ ಸಂಪುಟ ಸಭೆಯಲ್ಲಿ ಅಭಯ ನೀಡಿದ್ದಾರೆ. ನೀವು ಯಾರು ಹೆದರಬೇಡಿ ಎಂದು ಮುಖ್ಯಮಂತ್ರಿ ನಮಗೆ ಆಭಯ ನೀಡಿದ್ದಾರೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *