ಸುಧಾಕರ್ ಮಂತ್ರಿ ಆಗಬೇಕು – ಬಿಜೆಪಿ ಪರ ನಟಿ ಹರ್ಷಿಕಾ ಪೂಣಚ್ಚ ಪ್ರಚಾರ

ಚಿಕ್ಕಬಳ್ಳಾಪುರ: ಉಪಚುನಾವಣೆಯ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ನಟಿ ಹರ್ಷಿಕಾ ಪೂಣಚ್ಚ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ 1ನೇ ವಾರ್ಡಿನಲ್ಲಿ ಹರ್ಷಿಕಾ ಪೂಣಚ್ಚ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿರುವ ಸುಧಾಕರ್ ಈ ಬಾರಿಯೂ ಗೆಲುವು ಸಾಧಿಸಲಿದ್ದು ಮಂತ್ರಿಯಾಗಬೇಕು ಎಂಬುದು ನಮ್ಮ ಆಸೆ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಧಾಕರ್ ಅವರು ತುಂಬಾ ಒಳ್ಳೆಯ ನಾಯಕ, ಅವರು ಈ ಚುನಾವಣೆಯಲ್ಲಿ ಗೆಲ್ಲಬೇಕು. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಕಡೆ ರೋಡ್ ಮಾಡಿಸಿದ್ದಾರೆ. ಸುಧಾಕರ್ ರೀತಿಯ ಡೈನಾಮಿಕ್ ನಾಯಕರು ಈ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೇಕಾಗಿದ್ದಾರೆ. ಜನರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುವ ರಾಜಕಾರಣಿಗಳು ನಮಗೆ ಬೇಕು ಎಂದು ಹೇಳಿದರು.

ನಾನು ಚಿಕ್ಕಬಳ್ಳಾಪುರವನ್ನು ಬಹಳ ದಿನಗಳಿಂದ ನೋಡಿದ್ದೇನೆ. ಈ ಜಿಲ್ಲೆ ಹಿಂದೆ ಹೇಗಿತ್ತು? ಈಗ ಹೇಗೆ ಅಭಿವೃದ್ಧಿಯಾಗಿದೆ. ಇದಕ್ಕೆಲ್ಲ ಕಾರಣ ಯಾರು ಎಂಬುದು ನನಗೆ ಗೊತ್ತು. ಸುಧಾಕರ್ ಗೆದ್ದು ಶಾಸಕರಾಗಿ ನಂತರ ಮಂತ್ರಿಯಾಗಬೇಕು. ಒಂದು ಹೊಸ ತಾಲೂಕನ್ನು ಮಾಡಿಸುವುದು ಸುಲಭದ ಕೆಲಸವಲ್ಲ. ಆದರೆ ಸುಧಾಕರ್ ಅವರು ಮಂಚೇನಹಳ್ಳಿಯನ್ನು ಹೊಸ ತಾಲೂಕನ್ನಾಗಿ ಮಾಡಿದ್ದಾರೆ. ಐದು ಸಾವಿರ ಸೈಟ್ ಹಂಚಿದ್ದಾರೆ. ಮೆಡಿಕಲ್ ಕಾಲೇಜು ಕಟ್ಟಿಸುತ್ತಿದ್ದಾರೆ ಹಾಗಾಗಿ ಅವರು ಮತ್ತೆ ಗೆಲ್ಲಬೇಕು. ಈ ಕಾರಣಕ್ಕೆ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *