ಕೃಷಿಮೇಳ-ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆದ ಶಿವಕುಮಾರ ಶ್ರೀಗಳ ಕಲಾಕೃತಿ

ಚಿಕ್ಕಬಳ್ಳಾಪುರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕೃಷಿಮೇಳದಲ್ಲಿ ಶಿವೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಮರಳಿನ ಪ್ರತಿಮೆ ಎಲ್ಲರ ಮನ ಸೆಳೆಯುತ್ತಿದೆ.

ಸಾವಯುವ ಮತ್ತು ಸಿರಿಧಾನ್ಯ ಹಾಗೂ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀಗಳ ಮರಳಿನಲ್ಲಿ ಪ್ರತಿಮೆ ನಿರ್ಮಿಸಲಾಗಿದ್ದು, ಕೃಷಿ ಮೇಳಕ್ಕೆ ಭೇಟಿ ನೀಡಿದ ಅನೇಕರು ಕಲಾಕೃತಿಗೆ ನಮನ ಸಲ್ಲಿಸಿದ್ದಾರೆ. ಮರಳಿನ ಪ್ರತಿಮೆ ಅಷ್ಟೇ ಅಲ್ಲದೆ ತರಕಾರಿಯಲ್ಲಿಯೂ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಕಲಾಕೃತಿ ಅರಳಿದೆ.

ಪುಷ್ಪಗಳಲ್ಲಿ ಅರಳಿ ನಿಂತಿರುವ ಕೆಂಪುಕೋಟೆ ಜನಾಕರ್ಷಣೀಯವಾಗಿದೆ. ಮಹಾತ್ಮಾ ಗಾಂಧೀಜಿ ಅವರ ಸಬರಮತಿ ಆಶ್ರಮ, ಭಾರತ ರತ್ನ ಸರ್ ಎ.ವಿಶ್ವೇಶ್ವರಯ್ಯ ಅವರ ಪ್ರತಿಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಎರಡು ದಿನಗಳ ಕಾಲ ನಡೆಯುವ ಕೃಷಿ ಮೇಳದಲ್ಲಿ ನೂರಾರು ಕೃಷಿ ಪರಿಕರ ಮಳಿಗೆಗಳು ತೆರೆಯಲಾಗಿದೆ.

ಕೃಷಿ ಮೇಳದ ನಿಮಿತ್ತ ಎರಡೂ ದಿನ ಬೆಳಿಗ್ಗೆ 7 ಗಂಟೆಯಿಂದಲೂ ಸಂಜೆ 7 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಈ ಕೃಷಿ ಮೇಳವನ್ನು ಕೃಷಿ ಸಚಿವ ಶಿವಶಂಕರರೆಡ್ಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ. ಸುಧಾಕರ್ ವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *