80 ಅಡಿಯ ಕಂದಕಕ್ಕೆ ಕಾರ್ ಪಲ್ಟಿ- ದಂಪತಿ ಸೇರಿ ನಾಲ್ವರು ದುರ್ಮರಣ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ವ್ಯಾಗನರ್ ಕಾರೊಂದು 80 ಅಡಿಯ ಕಂದಕಕ್ಕೆ ಬಿದ್ದು ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹೀರೇಬೈಲು ಗ್ರಾಮದ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ವಿಶ್ವನಾಥ್ (55), ಪುಷ್ಪಾವತಿ (48) ದಂಪತಿ ಹಾಗೂ ರಾಹುಲ್ ರೈ (58) ಮಮತಾ (51) ದಂಪತಿ ಮೃತ ದುರ್ದೈವಿಗಳು. ಈ ಅಪಘಾತದ ಸಂಜು ಶೆಟ್ಟಿ ಎಂಬರಿಗೆ ಗಾಯವಾಗಿದ್ದು, ಅವರನ್ನು ಕಳಸ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಶ್ವನಾಥ್ ಸೇರಿದಂತೆ ಒಟ್ಟು 5 ಜನರು ಮೂಡಿಗೆರೆ ತಾಲೂಕಿನ ಬಾಳೆಹೊಳೆ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಯಕ್ಷಗಾನ ನೋಡಲು ವ್ಯಾಗನರ್ ಕಾರಿನಲ್ಲಿ ಬರುತ್ತಿದ್ದರು. ಕಳಸದಿಂದ ಬಾಳೆಹೊಳೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು 80 ಅಡಿ ಆಳದ ಕಂದಕಕ್ಕೆ ಬಿದ್ದಿದ್ದರಿಂದ ಕಾರಿನಲ್ಲಿದ್ದವರು ಕುಳಿತ್ತಿದ್ದ ಜಾಗದಲ್ಲೇ ಪ್ರಾಣ ಬಿಟ್ಟಿದ್ದರು.

ಈ ಘಟನೆಯ ಕುರಿತು ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಗಂಭೀರ ಗಾಯಗೊಂಡಿದ್ದ ಸಂಜು ಶೆಟ್ಟಿ ಅವರನ್ನು ಕಳಸದ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *