ಭತ್ತದ ಕಣದಲ್ಲಿ ಕ್ರಿಕೆಟ್ ಆಡಿದ ಸಂಸದ ತೇಜಸ್ವಿ ಸೂರ್ಯ

ಚಿಕ್ಕಮಗಳೂರು: ರಾಜಕೀಯ ಜಂಜಾಟವನ್ನೆಲ್ಲಾ ಬದಿಗೊತ್ತಿ ಸಂಸದ ತೇಜಸ್ವಿ ಸೂರ್ಯ ಹುಡುಗರ ಜೊತೆ ಭತ್ತದ ಕಣದಲ್ಲಿ ಕ್ರಿಕೆಟ್ ಆಡಿದ್ದಾರೆ.

ಬೆಂಗಳೂರಿನಲ್ಲಿ ವಾಸವಿರುವ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಚಿಗಸೆ ಮೂಲದ ಮಾಲತೇಶ್ ಸಂಸದ ತೇಜಸ್ವಿ ಸೂರ್ಯ ಸ್ನೇಹಿತ. ಇತ್ತೀಚಿಗೆ ಅವರ ಮನೆಯ ಗೃಹ ಪ್ರವೇಶ ನಡೆದಿತ್ತು. ಆದರೆ ಗೃಹಪ್ರವೇಶಕ್ಕೆ ತೇಜಸ್ವಿ ಸೂರ್ಯ ಬಂದಿರಲಿಲ್ಲ. ಅದಕ್ಕಾಗಿ ಸಂಸದರು ತಮ್ಮ ಸುಮಾರು 12 ಜನ ಸ್ನೇಹಿತರೊಂದಿಗೆ ಬಾಳೆಹೊನ್ನೂರಿಗೆ ಬಂದಿದ್ದರು. ಇದೇ ವೇಳೆ, ಸ್ನೇಹಿತನ ಮನೆ ಮುಂಭಾಗ ಭತ್ತದ ಕಣದಲ್ಲಿ ಹುಡುಗರು ಕ್ರಿಕೆಟ್ ಆಡುತ್ತಿದ್ದನ್ನ ಗಮನಿಸಿ ತೇಜಸ್ವಿ ಸೂರ್ಯ ಅವರು ತಮ್ಮ ಸ್ನೇಹಿತರನ್ನು ಕರೆದುಕೊಂಡು ಹೋಗಿ ಭತ್ತದ ಕಣದಲ್ಲೇ ಸುಮಾರು ಒಂದು ಗಂಟೆಗಳ ಕಾಲ ಕ್ರಿಕೆಟ್ ಆಡಿದ್ದಾರೆ.

ಕ್ರಿಕೆಟ್ ಆಡಿದ ಬಳಿಕ ತನ್ನ ಸ್ನೇಹಿತರೊಂದಿಗೆ ಬಾಳೆಹೊನ್ನೂರಿನ ಭದ್ರಾ ನದಿ, ಕಾಫಿ ತೋಟ, ಹೊಲಗದ್ದೆಗಳನ್ನು ಸುತ್ತು ಹೊಡೆದು, ಮಲೆನಾಡಿನ ಸೌಂದರ್ಯವನ್ನ ಸವೆದಿದ್ದಾರೆ. ಸಂಸದರೊಂದಿಗೆ ಬಿಜೆಪಿ ಯುವ ಘಟಕದ ಜಿಲ್ಲಾಧ್ಯಕ್ಷ ಪುಣ್ಯಪಾಲ್, ನಾಗರಾಜ್ ಭಟ್, ಶಶಾಂಕ್, ಮಂಜುನಾಥ್ ಕ್ರಿಕೆಟ್ ಆಡಿ ಸೆಲ್ಫಿ ಹೊಡೆದುಕೊಂಡು ಖುಷಿ ಪಟ್ಟಿದ್ದಾರೆ.

ಕ್ರಿಕೆಟ್ ಆಡುವಾಗ ಸಂಸದ ತೇಜಸ್ವಿ ಸೂರ್ಯ ಅವರು ಎಲ್ಲರೊಂದಿಗೆ ತಾವೂ ಕೂಡ ಒಬ್ಬನೆಂಬಂತೆ ಮಿಂಗಲ್ ಆಗಿ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮಾಡಿ ಉತ್ತಮ ಕ್ರಿಕೆಟ್ ಆಟಗಾರ ಎಂಬುದನ್ನು ತೋರಿಸಿದ್ದಾರೆ. ಬಾಳೆಹೊನ್ನೂರು ಹುಡುಗರು ಕೂಡ ಸಂಸದರ ಜೊತೆ ಕ್ರಿಕೆಟ್ ಆಡಿ ಖುಷಿ ಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *