ಸರ್ಕಾರಿ ಬಸ್ ಪಲ್ಟಿ – 2 ವರ್ಷದ ಮಗು ಸಾವು

ಚಿಕ್ಕಮಗಳೂರು: ಚಾಲಕನ ಅಜಾಗರೂಕತೆಯಿಂದ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಾಟಿಗನಗೆರೆ ಬಳಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ಮೃತ ಮಗುವನ್ನು ಎರಡು ವರ್ಷದ ಸುಹಾಸ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಹಲವರಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ತರೀಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.

ಧರ್ಮಸ್ಥಳ ದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಇದಾಗಿದ್ದು, ಚಾಲಕ ರಾತ್ರಿ ನಿದ್ರೆಗೆ ಜಾರಿದ ಹಿನ್ನೆಲೆ ಕಂಡಕ್ಟರ್ ಬಸ್ ಚಾಲನೆ ಮಾಡುತ್ತಿದ್ದನು. ಈ ವೇಳೆ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *