ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮ ಬಳಿ ನಡೆದಿದೆ.

ಈ ಘಟನೆಯಲ್ಲಿ ಕಾರಿನಲ್ಲಿದ್ದ ಅರಸೀಕೆರೆ ಮೂಲದ ಗೌತಮ್ ಸಿಂಗ್, ಮದನ್ ಸಿಂಗ್ ಮತ್ತು ಮುಖೇಶ್ ಸಿಂಗ್ ಸಾವನ್ನಪ್ಪಿದ್ದು, ಕ್ರೂಸರ್ ವಾಹನದಲ್ಲಿದ್ದ ಚಿಕ್ಕಮಗಳೂರು ಜಿಲ್ಲೆ ಮೂಲದ ಲೋಕೇಶ್ ಎಂಬವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗದ ಗಣೇಶೋತ್ಸಕ್ಕೆ ಬಂದು ತನ್ನ ಕ್ರೂಸರ್ ವಾಹನದಲ್ಲಿ ಹಿಂದಿರುಗುತ್ತಿದ್ದ ಲೊಕೇಶ್, ಮಾರ್ಗ ಮಧ್ಯೆ ಹೊಸದುರ್ಗದಿಂದ ಹಿಂದಿರುಗುತ್ತಿದ್ದ ಇಟಿಯಾಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಸಂಪೂರ್ಣ ನುಜ್ಜಾಗಿವೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *