ಸ್ಥಳೀಯರಿಗೆ ಸಚಿವ ಸ್ಥಾನ ನೀಡಿ – ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮಾದಾರಚನ್ನಯ್ಯ ಸ್ವಾಮೀಜಿ ಸಲಹೆ

ಚಿತ್ರದುರ್ಗ: ರಾಜ್ಯದಲ್ಲಿ ಆಡಳಿತ ನಡೆಸಿರೋ ಎಲ್ಲಾ ಸರ್ಕಾರಗಳು ವಲಸಿಗರಿಗೆ ಮಣೆ ಹಾಕಿವೆ. ಹೀಗಾಗಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಾದರೂ ಚಿತ್ರದುರ್ಗ ಜಿಲ್ಲೆಯ ಸ್ಥಳೀಯ ಶಾಸಕರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಮಾದಾರಚನ್ನಯ್ಯ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಿದ ಶ್ರೀಗಳು, ಪ್ರತಿಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆಯೂ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗ್ತಿದೆ. ವಲಸಿಗರಿಗೆ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡಲಾಗ್ತಿದೆ. ಹೀಗಾಗಿ ಈ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಈ ಬಾರಿ ಸ್ಥಳೀಯ ಶಾಸಕರಾಗಿರೋ ಚಂದ್ರಪ್ಪ ಅಥವಾ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆ ಅಭಿವೃದ್ಧಿಗೆ ಸಹಕರಿಸಿ ಎಂದು ಸಲಹೆ ನೀಡಿದರು.

ಇದೇ ವೇಳೆ ಮಠಕ್ಕೆ ಆಗಮಿಸಿದ್ದ ರಾಜ್ಯಾಧ್ಯಕ್ಷ ಕಟೀಲ್‍ಗೆ, ದಾವಣಗೆರೆ ಸಂಸದ ಸಿದ್ದೇಶ್ವರ್, ಶಾಸಕರಾದ ತಿಪ್ಪಾರೆಡ್ಡಿ, ಚಂದ್ರಪ್ಪ ಸಾಥ್ ನೀಡಿದರು.

Comments

Leave a Reply

Your email address will not be published. Required fields are marked *