ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

ಹಿಂದೂ ದೇವರನ್ನು ಸತತವಾಗಿ ಅವಮಾನಿಸುತ್ತಿರುವ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗುತ್ತಿವೆ. ಲೀನಾ ಅವರು ಮೊದಲ ಪೋಸ್ಟರ್ ನಲ್ಲಿ ಕೇವಲ ಕಾಳಿ ಕೈಗೆ ಸಿಗರೇಟು ನೀಡಿದ್ದರು. ನಂತರ ಮತ್ತೊಂದು ಪೋಸ್ಟ್ ಮಾಡಿದ್ದ ಅವರು ಶಿವ ಮತ್ತು ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟಿದ್ದರು. ಈ ಕುರಿತು ಕನ್ನಡದ ನಟ ನಟಿಯರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಯಿಸಿದ್ದಾರೆ. ನಟಿ ಮಾಳವಿಕಾ ಅವಿನಾಶ್ ಈ ನಡೆಯನ್ನು ವಿರೋಧಿಸಿದ್ದರೆ, ನಟ ಕಿಶೋರ್ ಮತ್ತೊಂದು ರೀತಿಯಲ್ಲಿ ಪ್ರತಿಕ್ರಯಿಸಿದ್ದಾರೆ.

ಶಿವನಿಗೆ ಬೇಡರ ಕಣ್ಣಪ್ಪ ಮಾಂಸವನ್ನು ಅರ್ಪಿಸಿದಾಗ ಅವನಿಗೆ ಹಿಂದೂ ದ್ವೇಷದ ದುರಹಂಕಾರ ಇರಲಿಲ್ಲ. ಹಾಗಾಗಿ ಶಿವನಿಗೆ ಆತನ ಭಕ್ತಿ ಇಷ್ಟವಾಗಿತ್ತು. ಅಜ್ಞಾನಕ್ಕಿಂತ ಭಕ್ತಿಯೇ ಶ್ರೇಷ್ಠತೆ ಪಡೆಯಿತು. ಇದೀಗ ಉದಾರವಾದಿಗಳ ವಿಕೃತಿ ಹೆಚ್ಚಾಗುತ್ತಿದೆ. ವಿಕೃತಿಗಳಿಗೆ ಮಾರ್ಗವಾಗಿದೆ ಎಂದಿದ್ದಾರೆ. ನಿಮ್ಮ ಅಭ್ಯಾಸ ಮತ್ತು ದುರ್ಗುಣಗಳನ್ನು ಹೇರಲು ಕಾಳಿ ಮಾತೆ ಸಾಕು ಪ್ರಾಣಿಯಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸ್ತ್ರಿವಾದಿ ಮಹುವಾ ಮೊಯಿತ್ರಾಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?

ಇದೇ ಪ್ರಕರಣಕ್ಕೆ ಹೋಲುವಂತೆ ನಟ ಕಿಶೋರ್ ಕೂಡ ವಿಭಿನ್ನವಾಗಿಯೇ ಪ್ರತಿಕ್ರಿಯೆ ನೀಡಿದ್ದು, ನನ್ನ ದೇವರು, ನನ್ನ ಭಕ್ತಿ, ನನ್ನ ನೈವೇದ್ಯಗಳು, ನನ್ನಹಕ್ಕು. ಅದು ನನ್ನ ನಾಡಿನ ಸೌಂದರ್ಯ, ನನ್ನ ನಾಡಿನ ಶಕ್ತಿ ಎಂದು ಬೇಡರ ಕಣ್ಣಪ್ಪ ಸಿನಿಮಾ ಪೋಸ್ಟರ್ ಶೇರ್ ಮಾಡಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಕಿಶೋರ್ ಅವರ ಈ ಪೋಸ್ಟ್ ಕೂಡ ಪರ ವಿರೋಧಕ್ಕೆ ಕಾರಣವಾಗಿದೆ

ನಿರ್ಮಾಪಕಿ ಲೀನಾ ಮಣಿಮೇಕಲೈ ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಮೊನ್ನೆಯಷ್ಟೇ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಹೀಗಾಗಿ ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿವೆ. ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *