ಅನುಮಾನಾಸ್ಪದ ರೀತಿಯಲ್ಲಿ ಕೊಡಗಿನ ಸೈನಿಕ ಶಾಲೆಯ ವಿದ್ಯಾರ್ಥಿ ಸಾವು

ಮಡಿಕೇರಿ: ವಿದ್ಯಾರ್ಥಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮದ ನಿವಾಸಿ ಪೂವಯ್ಯ ಎಂಬವರ ಪುತ್ರ ಪಿ.ಚಿಂಗಪ್ಪ (14) ಮೃತ ವಿದ್ಯಾರ್ಥಿ. ಮೃತ ಚಿಂಗಪ್ಪ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಶಾಲೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡದೇ ವಿದ್ಯಾರ್ಥಿಯ ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇತ್ತ ಬಾಲಕನ ಪೋಷಕರು ನಮ್ಮ ಮಗನನ್ನು ಕೊಲೆ ಮಾಡಲಾಗಿದೆ ಅಂತಾ ಆರೋಪಿಸಿ ಆಸ್ಪತ್ರೆ ಎದುರು ಚಿನ್ನಪ್ಪನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸೈನಿಕ ಶಾಲೆಯ ಪ್ರಾಂಶುಪಾಲರು ಆಗಮಿಸಬೇಕೆಂದು ಪಟ್ಟು ಹಿಡಿದ ಮೃತ ಬಾಲಕನ ಸಂಬಂಧಿಕರು ಸಾರ್ವಜನಿಕರು ಅಗ್ರಹಿಸುತ್ತಿದ್ದಾರೆ.

ಈ ಘಟನೆ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಅಗಿದೆ.

Comments

Leave a Reply

Your email address will not be published. Required fields are marked *