ವಿಧಾನಸಭೆಯಲ್ಲೇ ಇಬ್ಬರು ಸಚಿವರಿಗೆ ಸಿಎಂ ಫುಲ್ ಕ್ಲಾಸ್

ಬೆಂಗಳೂರು: ವಿಧಾನಸಭೆಯಲ್ಲಿಯೇ ಸಿಎಂ ಇಬ್ಬರು ಸಚಿವರ ಮೇಲೆ ಸಿಟ್ಟಾಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಚಿವ ಸಾರಾ ಮಹೇಶ್ ಮತ್ತು ಸಚಿವ ಜಿ.ಟಿ.ದೇವೇಗೌಡ ಅವರಿಗೆ ಸಿಎಂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಜೆಪಿ ಅವರನ್ನು ಮೀಟ್ ಮಾಡುವುದಕ್ಕೆ ಹೋಗಿದ್ಯಾ? ಎಂದು ಸಿಎಂ ಸಾ.ರಾ.ಮಹೇಶ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ಸಿಎಂ ಪ್ರಶ್ನೆಯಿಂದ ಕಕ್ಕಾಬಿಕ್ಕಿಯಾಗಿ ಜಿ.ಟಿ.ದೇವೇಗೌಡರ ಕಡೆಗೆ ಸಾ.ರಾ. ಮಹೇಶ್ ಬೊಟ್ಟು ಮಾಡಿ ತೋರಿಸಿದ್ದಾರೆ.

ಆಗ ಸ್ಪಷ್ಟನೆ ಕೊಡಲು ಮುಂದಾದ ಜಿಟಿಡಿ ಮೇಲೂ ಸಿಎಂ ಸಿಟ್ಟಾಗಿದ್ದಾರೆ. ಇಬ್ಬರಿಗೂ ಕೈ ತೋರಿಸಿ ಸಿಎಂ ವಾರ್ನಿಂಗ್ ಮಾಡಿದ್ದಾರೆ. ನಿಮ್ಮ ಆಟಗಳಿಂದ ಈ ಎಲ್ಲ ಡ್ರಾಮಾವನ್ನು ನೋಡಬೇಕಾಗಿದೆ ಎಂದು ಗುಡುಗಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ಕುಮಾರ ಕೃಪಾದಲ್ಲಿ ಭೇಟಿಯಾಗಿದ್ದರು ಇತ್ತ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಜಿ.ಟಿ.ದೇವೇಗೌಡ ಅವರಿಗೆ ಸ್ವಾಗತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಗಳಿಂದ ಸಿಎಂ ಅವರಿಗೆ ಮುಜುಗರ ಉಂಟಾಗಿದೆ. ಇದರಿಂದ ಕೋಪಗೊಂಡ ಸಿಎಂ ಇಬ್ಬರನ್ನು ಕರೆದು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ಕೂಡ ಜಿ.ಟಿ.ದೇವೇಗೌಡ ಅವರು ಕಲಾಪ ಪ್ರಾರಂಭವಾಗುವುದಕ್ಕೂ ಮುನ್ನವೇ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದರು.

Comments

Leave a Reply

Your email address will not be published. Required fields are marked *