ಆಪ್ತ ಸ್ನೇಹಿತನ ಪಾರ್ಥಿವ ಶರೀರ ಕಂಡು ಬಿಕ್ಕಿ ಬಿಕ್ಕಿ ಅತ್ತ ಸಿಎಂ

ಹುಬ್ಬಳ್ಳಿ: ಹೃದಯಾಘಾತದಿಂದ ಮೃತಪಟ್ಟ ಸ್ನೇಹಿತನ ಪಾರ್ಥಿವ ಶರೀರ ಕಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬಾಲ್ಯದಿಂದಲೂ ಆಪ್ತ ಸ್ನೇಹಿತ ಹಾಗೂ ಅಳಿಯನಾಗಿದ್ದ ರಾಜು ಪಾಟೀಲ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತರು.  ಇದನ್ನೂ ಓದಿ:ಜಗಳ ಬಿಡಿಸಲು ಹೋದ ಕಾನ್‍ಸ್ಟೇಬಲ್ ತಲೆಗೆ ಕಲ್ಲಿನಿಂದ ಹಲ್ಲೆ

ಹುಬ್ಬಳ್ಳಿಯ ಶಕ್ತಿನಗರದ ನಿವಾಸಿಯಾಗಿದ್ದ ರಾಜು ಪಾಟೀಲ ಮೃತಪಟ್ಟ ಪರಿಣಾಮ ಬಸವರಾಜ ಬೊಮ್ಮಾಯಿ ದುಃಖ ತೃಪ್ತರಾಗಿದ್ದು, ಅವರ ಈಡೀ ಕುಟುಂಬ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿ ಕಣ್ಣೀರು ಸುರಿಸಿದರು.

ಪತ್ನಿ, ಪುತ್ರ, ಪುತ್ರಿ ಸಹೋದರಿಯೊಂದಿಗೆ ಹುಬ್ಬಳ್ಳಿಗೆ ಆಗಮಿಸಿರುವ ಬೊಮ್ಮಾಯಿ ರಾಜು ಪಾಟೀಲ ಪತ್ನಿ ಹಾಗೂ ಕುಟುಂಬಸ್ಥರನ್ನು ಸಮಾಧಾನಪಡಿಸಿದರು. ಸಂಜೆ ನಡೆಯುವ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಬೊಮ್ಮಾಯಿ ಭಾಗವಹಿಸಲಿದ್ದಾರೆ.  ಇದನ್ನೂ ಓದಿ:ಇಂದು ಮಧ್ಯಾಹ್ನ ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ

Comments

Leave a Reply

Your email address will not be published. Required fields are marked *