ಸಿಎಂ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಕ್ಕೆ ಸೈ ಅಂತಾ ಹೇಳ್ತಾರೆ: ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಂತೆ ಅಧಿಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಆರು ತಿಂಗಳ ಕಾಲವೂ ಉಳಿಯುವುದಿಲ್ಲ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಎಂಬುದನ್ನು ಈ ಇಬ್ಬರೂ ನಾಯಕರೂ ತೋರಿಸಿದ್ದಾರೆ ಎಂದು ಈಶ್ವರಪ್ಪ ದೂರಿದರು.

ಬಿಡಿಎ ದಲ್ಲಿ ನೂರಾರು ಹಗರಣಗಳಿದ್ದು, ರಾಮಲಿಂಗಂ ಹಗರಣ ಮಾತ್ರ ಒಂದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂಬವುದು ಗೊತ್ತಾಗುತ್ತಿಲ್ಲ. ಸಿದ್ದರಾಮಯ್ಯರಿಗೂ ಮತ್ತು ಕುಮಾರಸ್ವಾಮಿ ಅವರಿಗೂ ಕುಸ್ತಿ ಆಡೋದಕ್ಕೆ ಸಮಯ ಸಿಗುತ್ತಿಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಹೊರತು ಒಂದು ಹೆಜ್ಜೆಯನ್ನು ಮುಂದಕ್ಕೆ ಇಟ್ಟಿಲ್ಲ. ಹೆಸರಿಗೆ ಮಾತ್ರ ಕುಮಾರಸ್ವಾಮಿ ಸಿಎಂ, ಎಲ್ಲ ಆಡಳಿತವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *