ಆಂಧ್ರ ಮೂಲದ ಹುಡುಗಿ ಜೊತೆ ನಿಖಿಲ್ ಮದ್ವೆ – ಸಿಎಂ ಎಚ್‍ಡಿಕೆ ಸ್ಪಷ್ಟನೆ

ಹೈದರಾಬಾದ್: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ಎಚ್.ಕೆ. ನಿಖಿಲ್ ಗೌಡರಿಗೆ ಹುಡುಗಿ ನೋಡಲು ದೆಹಲಿಯಿಂದ ನೇರವಾಗಿ ಅಮರಾವತಿಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ವತಃ ಸಿಎಂ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಇಂದು ನಿಖಿಲ್ ಗೆ ಹುಡುಗಿ ನೋಡುವುದಕ್ಕಾಗಿ ಸಿಎಂ ದಂಪತಿ ಆಂಧ್ರಕ್ಕೆ ತೆರಳಿದ್ದರು. ಆಂಧ್ರ ಪ್ರದೇಶದ ಖ್ಯಾತ ಉದ್ಯಮಿಯೊಬ್ಬರ ನಿಖಿಲ್ ಮದುವೆ ಎಂದು ಮೂಲಗಳಿಂದ ತಿಳಿದು ಬಂದಿತ್ತು. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಮಾತನಾಡಿ ನಾವು ನಿಖಿಲ್ ಮದುವೆ ಮಾತುಕತೆಗೆ ಬಂದಿಲ್ಲ ಎಂದು ವಿಜಯವಾಡದಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

ನಿಖಿಲ್ ಈ ಹಿಂದೆ ಸಂದರ್ಶನದಲ್ಲಿ ಇನ್ನು ಮೂರು ವರ್ಷ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದರು. ಪಬ್ಲಿಕ್ ಟಿವಿ ಇಂದು ಈ ವಿಚಾರಕ್ಕೆ ಕರೆ ಮಾಡಿದಾಗ, ಮದುವೆ ಮಾತುಕತೆ ಏನು ಇಲ್ಲ, ನಮಗೆ ಸಮಯ ಕೊಡಿ ತಿಳಿದುಕೊಂಡು ಹೇಳುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇದು ಅವರ ವೈಯಕ್ತಿಕ ವಿಚಾರ, ಹುಡುಗಿ ಒಪ್ಪಿಗೆ ಆದರೆ ಮದುವೆ ಮಾಡೋಣ ಎಂದು ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಸಿಎಂ ಕುಮಾರಸ್ವಾಮಿಯವರು ಅಮರಾವತಿಯ ದುರ್ಗಾ ದೇವಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ್ದರು. ಸಾಧಾರಣವಾಗಿ ಎಚ್‍ಡಿಕೆ ಹರಕೆ ತೀರಿಸಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಇಂದು ಯಾವುದೇ ಹರಕೆಯನ್ನು ತೀರಿಸಲು ಭೇಟಿ ಕೊಟ್ಟಿಲ್ಲ. ಪುತ್ರನ ಮದುವೆ ವಿಚಾರ ಮಾತನಾಡಲು ಅಮರಾವತಿಗೆ ಹೋಗಿದ್ದು, ಇಂದು ಅನೌಪಚಾರಿಕ ಮಾತುಕತೆ ನಡೆಯಲಿದೆ. ಮುಹೂರ್ತ ನೋಡಿ ಎರಡೂ ಕುಟುಂಬಗಳು ಮತ್ತೊಮ್ಮೆ ಮಾತುಕತೆ ನಡೆಸಲಿವೆ. ಮುಂದಿನ ತಿಂಗಳು ದೇವೇಗೌಡರ ಕುಟುಂಬ ಸದಸ್ಯರೆಲ್ಲರೂ ತೆರಳಿ ಮಾತುಕತೆ ನಡೆಸಲಿದ್ದಾರೆ ಎನ್ನುವ ಸುದ್ದಿ ಈಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *