ಮೇಕೆದಾಟು ಸಂಧಾನಕ್ಕೆ ನಿತಿನ್ ಗಡ್ಕರಿ ಸಾರಥ್ಯ

ನವದೆಹಲಿ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲ ಇದ್ದು, ಎರಡೂ ರಾಜ್ಯಗಳ ಸಿಎಂಗಳ ಸಭೆ ನಡೆಸಿ ಸಂಧಾನ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿಗೆ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧಿಸುತ್ತಿರುವುದನ್ನು ಖಂಡಿಸಿ ನಾಳೆ ಸಂಸತ್ ಭವನದ ಎದುರು ರಾಜ್ಯದ ಎಲ್ಲಾ ಸಂಸದರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲ ಸಂಸದರು ಭಾಗಿಯಾಗಲಿದ್ದಾರೆ. ಕಳೆದ ಗುರುವಾರ ನಡೆದ ಸರ್ವಪಕ್ಷ ಸಂಸದರ ಸಭೆಯಲ್ಲಿ ತಮಿಳುನಾಡು ನಡೆ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ರಾಜ್ಯದ ಎಲ್ಲಾ ಸಂಸದರು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವಂತೆ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.

ಚಳಿಗಾಲದ ಸಂಸತ್ ಅಧಿವೇಶನ ಆರಂಭದಿಂದಲೂ ತಮಿಳುನಾಡಿನ ಸಂಸದರು ಸಂಸತ್‍ನ ಒಳಗೂ ಮತ್ತು ಹೊರಗೂ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಮೇಕೆದಾಟು ಯೋಜನೆ ತಮಿಳುನಾಡಿಗೆ ಮಾರಕವಾಗಲಿದ್ದು. ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಹಾಗೂ ಜಲ ಆಯೋಗ ನೀಡಿರುವ ಆರಂಭಿಕ ಒಪ್ಪಿಗೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು. ತಮಿಳುನಾಡಿನ ಈ ಹೋರಾಟಕ್ಕೆ ಪ್ರತಿ ಹೋರಾಟ ರೂಪಿಸಲು ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಸದರ ಸಭೆ ನಡೆಸಿ ಸಂಸತ್ ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು. ಇದನ್ನು ಓದಿ: ದೆಹಲಿಯಲ್ಲಿ ಮೇಕೆದಾಟು ಸರ್ವಪಕ್ಷ ಸಭೆ: ಏನೇನು ಚರ್ಚೆಯಾಗಿದೆ?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *