ಏಕಾಏಕಿ ಮದ್ಯ ನಿಷೇಧ ಸಾಧ್ಯವಿಲ್ಲ- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮದ್ಯವನ್ನು ಏಕಾಏಕಿ ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮದ್ಯಪಾನ ನಿಷೇಧಕ್ಕಾಗಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಸಾರಾಯಿ ನಿಷೇಧ ಮಾಡಿದ್ದು ನಾವೇ. ಆದರೆ ಮದ್ಯ ನಿಷೇಧದ ಸಾಧಕ-ಬಾಧಕಗಳ ಕುರಿತು ಸಂಪುಟದಲ್ಲಿ ಚರ್ಚೆ ಮಾಡಲಾಗುತ್ತದೆ. ಅಧಿಕಾರಿಗಳು, ಸಚಿವರ ಜೊತೆ ಚರ್ಚೆ ನಡೆಸಿದ ಬಳಿಕ ಸೂಕ್ತ ತಿರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ಜನವರಿ 19ರಂದು ಕಾಲ್ನಡಿಗೆ ಮೂಲಕ ಬೆಂಗಳೂರಿಗೆ ಹೊರಟಿದ್ದರು. ಸತತ 10 ದಿನಗಳ ಕಾಲ ನಡೆದುಕೊಂದು ಬಂದು ಮಂಗಳವಾರ ರಾಜಧಾನಿಯನ್ನು ತಲುಪಿದ್ದಾರೆ. ಮಲ್ಲೇಶ್ವರಂನ ಗ್ರೌಂಡ್‍ನಲ್ಲಿ ವಾಸ್ತವ್ಯ ಹೂಡಿದ್ದ ಮಹಿಳೆಯರು ಚಳಿಯಲ್ಲೇ ರಾತ್ರಿ ಕಳೆದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿರುವ ಹಿನ್ನಲೆಯಲ್ಲಿ ಅವರನ್ನು ಫ್ರೀಡಂ ಪಾರ್ಕ್ ಬಳಿಯೇ ತಡೆಯಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *