ನಮ್ಮ ಸಹನೆಯನ್ನು ದೌರ್ಬಲ್ಯವೆಂದು ಪರಿಗಣಿಸಬೇಡಿ – ಕೇಂದ್ರದ ವಿರುದ್ಧ ಗುಡುಗಿದ ಸಿಎಂ

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಪ್ರತಿನಿಧಿ ನೇಮಕ ವಿಷಯದಲ್ಲಿ ಕೇಂದ್ರ ಸರ್ಕಾರ ಏಕ ಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೋರ್ಟ್ ನಿಯಮ ಜಾರಿ ವೇಳೆ ಕೆಲ ನಿರ್ಣಯಗಳನ್ನು ತಿರುಚಲಾಗಿದೆ. ಅದನ್ನು ಸರಿಪಡಿಸಲು ಈಗಾಗಲೇ ಕೇಂದ್ರಕ್ಕಾಗಿ ಈ ಕುರಿತು ಮನವಿ ಮಾಡಿದ್ದಾಗಿ ಹೇಳಿದ್ದಾರೆ.

ಕಾವೇರಿ ಸ್ಕೀಂ ರಚನೆ ಎಂಬುವುದು ನ್ಯಾಯಾಲಯದ ತೀರ್ಮಾನವಾಗಿದ್ದು ಇದಕ್ಕೆ ಕರ್ನಾಟಕ ಸಂಪೂರ್ಣ ಬೆಂಬಲ ನೀಡಿದೆ. ಆದರೆ ನ್ಯಾಯಾಲಯದ ನಿಯಮಗಳನ್ನು ಜಾರಿಗೆ ತರುವ ವೇಳೆ ಸ್ಕೀಂ ಕರಡು ಪ್ರತಿಯಲ್ಲಿ ಕೆಲ ಲೋಪದೋಷಗಳು ಉಂಟಾಗಿದೆ. ಈ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದೇನೆ. ಆದರೆ ಕೇಂದ್ರ ಸರ್ಕಾರ ಇದನ್ನು ಪರಿಗಣಿಸಿಲ್ಲ. ನಮ್ಮ ಸಹನೆಯನ್ನು ದೌರ್ಬಲ್ಯವೆಂದು ಪರಿಗಣಿಸಬೇಡಿ. ಈಗ ಕೈಗೊಂಡಿರುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.

ಕೇಂದ್ರದ ಪ್ರಾಧಿಕಾರ ರಚನೆ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಪತ್ರ ಬರೆಯತ್ತೇವೆ. ಈ ಕುರಿತು ಸಲಹೆ ನೀಡಲು ತಜ್ಞರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ ಕಾನೂನಾತ್ಮಾಕವಾಗಿ ಇದು ಮುಗಿದ ಅಧ್ಯಯವಾದರೂ ಸ್ಕೀಂ ರಚನೆಯಲ್ಲಿ ಈ ಸಂಬಂಧ ಅಡ್ವೊಕೇಟ್ ಜನರಲ್ ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ನಮ್ಮ ರಾಜ್ಯದ ಅಹವಾಲು ತಲುಪಿಸುತ್ತೇನೆ. ಪ್ರಾಧಿಕಾರ ರಚನೆ ವಿಚಾರದಲ್ಲಿ ನಾವು ಕೆಲವು ಸಲಹೆ ಕೊಟ್ಟಿದ್ದೆವು ಆದರೆ ಕೇಂದ್ರ ಸರ್ಕಾರ ಏಕಪಕ್ಷೀಯ ತೀರ್ಮಾನ ಕೈಗೊಂಡಿದೆ ಎಂದು ಗುಡುಗಿದರು.

https://www.youtube.com/watch?v=L1fxbS09L8Y

Comments

Leave a Reply

Your email address will not be published. Required fields are marked *