ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಿಎಂ- ರಾಜ್ಯದ ಒಳಿತು ಕೋರಿ ಪೂಜೆ ಅಂದ್ರು ಎಚ್‍ಡಿಕೆ

ಬೆಂಗಳೂರು: ಇಂದು ಶತಮಾನದ ಸುದೀರ್ಘ ರಕ್ತ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಇದೀಗ ಅಷ್ಟೇ ಸಿಎಂ ಕುಮಾರಸ್ವಾಮಿ ಅವರು ಕೂಡ ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಸುಪ್ರಭಾತ ಸೇವೆ ಮತ್ತು ತೋಮಾಲಾ ಸೇವೆಯಲ್ಲಿ ಸಿಎಂ ಕುಮಾರಸ್ವಾಮಿ ದಂಪತಿ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪತ್ನಿ ಸಮೇತರಾಗಿ ಪಾಲ್ಗೊಂಡಿದ್ರು. ಈ ವೇಳೆ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಟಿಟಿಡಿ ವತಿಯಿಂದ ರೇಷ್ಮೇ ಶಾಲು ಹೊದಿಸಿ ಸನ್ಮಾನಿಸಲಾಯ್ತು.

ತಿಮ್ಮಪ್ಪನ ದರುಶನ ಬಳಿಕ ಮಾತನಾಡಿದ ಕುಮಾರಸ್ವಾಮಿ, ತಿರುಪತಿ ಭೇಟಿ ಹಿಂದೆ ವಿಶೇಷವೇನೂ ಇಲ್ಲ. ರಾಜ್ಯದ ಒಳಿತು ಕೋರಿ ತಿಮ್ಮಪ್ಪನಿಗೆ ವಿಶೆಷ ಪೂಜೆ ಸಲ್ಲಿಸಿರುವೆ ಅಂತಾ ಹೇಳಿದ್ರು.

ನಿನ್ನೆ ಒಂದೇ ದಿನ ಬರೋಬ್ಬರಿ 6.28 ಕೋಟಿ ರೂಪಾಯಿ ಸಂಗ್ರಹವಾಗಿದ್ದು ದಾಖಲೆಯಾಗಿದೆ. ಇನ್ನು 2012 5.73 ಕೋಟಿ ರೂಪಾಯಿ ಸಂಗ್ರಹವಾಗಿದ್ದೆ ಅತ್ಯಧಿಕ ಮೊತ್ತವಾಗಿತ್ತು.

Comments

Leave a Reply

Your email address will not be published. Required fields are marked *