– ಜಲ್ಲಿ ಹಾಕಿ ಟಾರ್ ಹಾಕದ ಎಂಜಿನಿಯರ್ ಸಸ್ಪೆಂಡ್
– ರಸ್ತೆಯಲ್ಲೇ ಕಸ ಸುರಿದಿರೋದಕ್ಕೆ ಸಿಎಂ ಗರಂ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ರಸ್ತೆಗುಂಡಿಗಳಿಂದಾಗಿ (Road Potholes) ಗುಂಡಿಯೂರು ಅಂತ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಅಭಿಯಾನದ ಬೆನ್ನಲ್ಲೇ ಸಿಎಂ, ಡಿಸಿಎಂ ನಗರ ಪ್ರದಕ್ಷಿಣೆ ನಡೆಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆಯ ಅಂಗವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರು ಟಿ.ಕ್ರಾಸ್ಗೆ ಭೇಟಿನೀಡಿ, ರಸ್ತೆ, ಒಳಚರಂಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದರು.
ಈ ವೇಳೆ ಪಣತ್ತೂರಿನ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಸುರಿದಿರುವುದನ್ನು ಗಮನಿಸಿ, ಸಿಸಿ ಟಿವಿ ಅಳವಡಿಕೆ ಮಾಡಿ… pic.twitter.com/rO8iM4DGIf
— CM of Karnataka (@CMofKarnataka) September 27, 2025
ಬೆಂಗಳೂರಿನ ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತ, ಹೆಬ್ಬಾಳ ಫ್ಲೈಓವರ್ ರಸ್ತೆಯಲ್ಲಿ ಸಿಎಂ (Siddaramaiah) ಪರಿಶೀಲನೆ ನಡೆಸಿದ್ದಾರೆ. ಹೆಬ್ಬಾಳ ಫ್ಲೈಓವರ್ ರಸ್ತೆಯಲ್ಲಿ ರಸ್ತೆಯಲ್ಲಿ ಕಸ ಡಂಪ್ ಮಾಡಿದ್ದಕ್ಕೆ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣೂರು-ಬಾಗಲೂರು ರಸ್ತೆ ವೈಟ್ ಟ್ಯಾಪಿಂಗ್ ಕೂಡ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್ಗೆ ಕೇವಲ 150 ರೂ. ಬಿಡುಗಡೆ
ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆಯ ನಿಮಿತ್ತ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ವೈಟ್ ಟಾಪಿಂಗ್ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು… pic.twitter.com/trizOFBT3H
— CM of Karnataka (@CMofKarnataka) September 27, 2025
ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಸಿಎಂ, 16 ಸಾವಿರ ಗುಂಡಿಗಳಲ್ಲಿ 4 ಸಾವಿರ ಮಾತ್ರ ಬಾಕಿ ಇದೆ. ಎಲ್ಲೆಲ್ಲಿ ಗುಂಡಿಗಳು ಇದೆಯೋ ಅಲ್ಲೆಲ್ಲಾ ಮುಚ್ಚಲು ಸೂಚನೆ ನೀಡಿದ್ದೇನೆ. ಗುಂಡಿಗಳಿಗೆ ಜಲ್ಲಿ ಹಾಕಿ ಟಾರ್ ಹಾಕದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ನ ಅಮಾನತು ಮಾಡಿದ್ದೇನೆ. ಹೆಣ್ಣೂರು ರಸ್ತೆ ವೈಟ್ ಟ್ಯಾಪಿಂಗ್ ಆಗಿದೆ. ಪ್ರತಿ ಕಿಲೋ ಮೀಟರ್ ರಸ್ತೆಗೆ 13 ಕೋಟಿ ರೂ. ಕೊಡುತ್ತಿದ್ದೇವೆ. ಬಿಜೆಪಿಯವರು ಗುಂಡಿಗಳು ಮುಚ್ಚಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ
ಡಿಸಿಎಂ ಡಿಕೆಶಿ (DK Shivakumar) ಕನಕಪುರ ಪ್ರವಾಸಕ್ಕೆ ತೆರಳುವಾಗ ಮಾರ್ಗಮಧ್ಯದಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ
