ಗಣೇಶ ಹಬ್ಬಕ್ಕೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ- ಡಿಸಿ, ಸಿಇಓಗಳಿಗೆ ಸಿಎಂ ಸೂಚನೆ

ಬೆಂಗಳೂರು: ಗಣೇಶ ಹಬ್ಬಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ (Vidhanasoudha) ನಡೆದ ಡಿಸಿ, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಹೈಅಲರ್ಟ್ ಇರುವಂತೆ ಸಂದೇಶ ಕೊಟ್ಟರು. ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವ ಧರ್ಮದವರಿಗೂ ತೊಂದರೆಯಾಗಬಾರದು ಅಂತ ಡಿಸಿ, ಸಿಇಓಗಳಿಗೆ ಸೂಚನೆ ಕೊಟ್ರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]