ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ ಸೋಲು ಗ್ಯಾರೆಂಟಿ: ಶೋಭಾ ಕರಂದ್ಲಾಜೆ

ಉಡುಪಿ: ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರಿಗೆ ಸೋಲು ಗ್ಯಾರೆಂಟಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಕ್ಷೇತ್ರ ಬದಲು ಮಾಡಲೇಬೇಕು. ಖಂಡಿತಾ ಅವರು ಬೇರೆ ಕಡೆ ಹೋಗಲೇಬೇಕು. ವರುಣಾ ಕ್ಷೇತ್ರ ಸಿದ್ದರಾಮಯ್ಯರ ಕೈತಪ್ಪಿಯಾಗಿದೆ. ಹೀಗಾಗಿ ಅವರು ಎಲ್ಲೇ ಸ್ಪರ್ಧಿಸಿದರೂ ಅವರಿಗೆ ಸೋಲು ಖಚಿತ ಎಂದು ಹೇಳಿದರು.

ಬಿಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೇರೆ ಬೇರೆ ಜಿಲ್ಲೆಯಿಂದ ಬೇಡಿಕೆ ಬರುತ್ತಿದೆ ಅವರು ಎಲ್ಲಿ ಸ್ಪರ್ಧಿಸಬೇಕು ಅನ್ನೋದನ್ನ ಇನ್ನೂ ನಿರ್ಧಾರ ಮಾಡಿಲ್ಲ. ಪ್ರೀತಿಯ ಸ್ವಕ್ಷೇತ್ರ ಶಿವಮೊಗ್ಗವನ್ನು ಬಿಡಲು ಅವರಿಗೆ ಮನಸ್ಸಿಲ್ಲ. ಸ್ಪರ್ಧೆಯ ಬಗ್ಗೆ ಯಡಿಯೂರಪ್ಪ ಬಹಳ ದ್ವಂದ್ವದಲ್ಲಿದ್ದಾರೆ. ಅವರು ಎಲ್ಲೇ ನಿಂತರೂ ಬಹುಮತದಿಂದ ಗೆಲ್ಲುತ್ತಾರೆ ಎಂದರು.

Comments

Leave a Reply

Your email address will not be published. Required fields are marked *