ಪಟ್ಟಿ ಬಿಡುಗಡೆ ಮುನ್ನವೇ ಭಿನ್ನಮತ ಶಮನಕ್ಕೆ ಸಿಎಂ ಯತ್ನ!

ನವದೆಹಲಿ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗುವ ಮುನ್ನವೇ ಭಿನ್ನಮತ ಶಮನಕ್ಕೆ ಸಿಎಂ ಯತ್ನಿಸಿದ್ದಾರೆ. ದೆಹಲಿಯ ಖಾಸಗಿ ಹೊಟೇಲ್‍ನಲ್ಲಿ ಆಕಾಂಕ್ಷಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ.

ಎಲ್ಲರಿಗೂ ಟಿಕೆಟ್ ಕೊಡಲು ಸಾಧ್ಯವಿಲ್ಲ. ಈ ಬಾರಿಯ ಗೆಲುವು ಕಾಂಗ್ರೆಸ್‍ಗೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕೂರಬೇಡಿ. ಯಾರೇ ಅಭ್ಯರ್ಥಿಯಾದ್ರೂ ಪಕ್ಷದ ಪರ ಕೆಲಸ ಮಾಡಿ ಎಂದು ಸಭೆಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಆಕಾಂಕ್ಷಿಗಳ ಮನವೊಲಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ದಾರೆ. ಇದಾದ ನಂತರ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *