‘ಲೋಕಾ’ ಫಲಿತಾಂಶ ಬಂದ 24 ಗಂಟೆಯೊಳಗೆ ಮೈತ್ರಿ ಸರ್ಕಾರ ಪತನ: ನಿರಾಣಿ ಭವಿಷ್ಯ

ದಾವಣಗೆರೆ: ಮೇ 23 ರಂದು ಕೇಂದ್ರದಲ್ಲಿ ಮೋದಿ ಪ್ರಧಾನಿಯಾಗುತ್ತಾರೆ. ಲೋಕಸಭಾ ಫಲಿತಾಂಶ ಬಂದ 24 ಗಂಟೆಯ ಒಳಗಡೆ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಪಕ್ಷ ಜೆಡಿಎಸ್ ಅವರಿಗೆ ಕೈ ಕೊಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಲಿದ್ದಾರೆ. ಲೋಕ ಫಲಿತಾಂಶದ ಬಳಿಕ ಮೈತ್ರಿ ಮುರಿಯಲಿದೆ ಎಂದು ಭವಿಷ್ಯ ನುಡಿದರು.

ಕೆಲವು ಮೈತ್ರಿ ಶಾಸಕರು ಬಿಜೆಪಿ ಸೇರಲಿದ್ದಾರೆ. ಹೀಗಾಗಿ ಆಪರೇಷನ್ ಕಮಲ ಅಗತ್ಯವಿಲ್ಲ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ. ಬಿಜೆಪಿ ಸರ್ಕಾರ ರಚನೆ ಆಗೋದು ಗ್ಯಾರಂಟಿ, ಎಲ್ಲವನ್ನು ಕಾದು ನೋಡಿ ಎಂದು ಹೇಳಿದರು.

Comments

Leave a Reply

Your email address will not be published. Required fields are marked *