ರಸ್ತೆ ಅಗಲೀಕರಣದ ವೇಳೆ ಜೆಸಿಬಿಗೆ ಸಿಲುಕಿದ್ದ ನಾಗರಾಜನ ರಕ್ಷಣೆ

ಚಿಕ್ಕಮಗಳೂರು: ರಸ್ತೆ ಅಗಲೀಕರಣದ ಕಾಮಗಾರಿ ವೇಳೆ ಜೆಸಿಬಿಗೆ ಸಿಲುಕಿದ್ದ ನಾಗರಹಾವನ್ನು ಸ್ಥಳೀಯರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಬಳಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ 7 ಅಡಿ ಉದ್ದದ ನಾಗರಹಾವು ಕಾರ್ಯ ನಿರ್ವಹಿಸುತ್ತಿದ್ದ ಜೆಸಿಬಿ ಅಡಿ ಸಿಲುಕಿತ್ತು. ಗಾಯಗೊಂಡಿದ್ದ ನಾಗರಹಾವನ್ನು ನೋಡಿದ ಸ್ಥಳೀಯರು ಕೂಡಲೇ ಉರಗ ತಜ್ಞ ಆರೀಫ್ ಎಂಬವರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಆರೀಫ್ ಗಾಯಗೊಂಡಿದ್ದ ಹಾವಿಗೆ ಮೊದಲಿಗೆ ನೀರು ಕುಡಿಸಿದ್ದಾರೆ. ನಿಧಾನವಾಗಿ ಹಾವನ್ನು ಸೆರೆ ಹಿಡಿದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹಾವು ಸುಧಾರಿಸಿಕೊಳ್ಳುತ್ತಿದ್ದಂತೆ ಅದನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

https://youtu.be/CP307VET23I

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *