ಮೀನಿನ ಬಲೆಯಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ: ವಿಡಿಯೋ ನೋಡಿ

ಕಾರವಾರ: ದನಗಳು ಹೂವುಗಳನ್ನು ತಿನ್ನಬಾರದೆಂದು ಗಿಡಗಳ ಮೇಲೆ ಹಾಕಿದ್ದ ಮೀನಿನ ಬಲೆಗೆ ಸಿಲುಕಿಕೊಂಡಿದ್ದ ನಾಗರಹಾವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿಯಲ್ಲಿ ನಡೆದಿದೆ.

ಆಹಾರ ಅರಸಿ ಮುಂಡಳ್ಳಿ ಗ್ರಾಮದ ತಿರಗನಮನೆ ಶನಿಯಾರ ನಾಯ್ಕ ಎಂಬುವವರ ಮನೆಗೆ ರಾತ್ರಿ ವೇಳೆಯಲ್ಲಿ ಬಂದಿದ್ದ ನಾಗರಹಾವು, ಗಿಡಗಳ ಮೇಲೆ ಹಾಕಲಾಗಿದ್ದ ಮೀನಿನ ಬಲೆಗೆ ಸಿಲುಕಿದೆ. ಇದು ಬೆಳಗ್ಗೆ ಮನೆಯ ಮಾಲೀಕರ ಗಮನಕ್ಕೆ ಬಂದಕೂಡಲೇ ಸ್ಥಳೀಯ ಉರಗ ತಜ್ಞ ಮಾದೇವ ನಾಯ್ಕರವರಿಗೆ ಮಾಹಿತಿ ನೀಡಿದ್ದಾರೆ.

ಹಾವಿನ ರಕ್ಷಣಾ ಕಾರ್ಯವನ್ನ ನಡೆಸುವ ಕಾರ್ಯವನ್ನು ಮಾಡುತ್ತಿರುವ ಮಾದೇವ ಅವರು ತಕ್ಷಣ ಸ್ಥಳಕ್ಕೆ ಆಗಮಿಸಿ ಬಲೆಯಲ್ಲಿ ಸಿಲುಕಿದ್ದ ನಾಗರಹಾವನ್ನು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬಲೆಯಲ್ಲಿ ಸಿಲುಕಿದ್ದ ನಾಗರಹಾವು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಗಾಯಗಳನ್ನು ಮಾಡಿಕೊಂಡಿದ್ದು ಉರಗ ತಜ್ಞ ಮಾದೇವನಾಯ್ಕ ಅದರ ದೇಹಕ್ಕೆ ಅರಿಶಿನ ಹಚ್ಚಿ ಉಪಚಾರ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=MXWKyYCwlco

 

Comments

Leave a Reply

Your email address will not be published. Required fields are marked *