ನೆಲಮಂಗಲದಲ್ಲಿ 25 ಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ ಬಸ್‍ಗಳನ್ನ ತಡೆದ ವಿದ್ಯಾರ್ಥಿಗಳು

ಬೆಂಗಳೂರು: ತುಮಕೂರು-ಬೆಂಗಳೂರು ರಸ್ತೆಯಲ್ಲಿ ಸಂಚರಿಸುವ ಬಹುತೇಕ ಕೆಎಸ್‍ಆರ್‍ಟಿಸಿ ಬಸ್‍ಗಳು ಸರ್ವೀಸ್ ರಸ್ತೆಗೆ ಬರದೇ ಹೆದ್ದಾರಿಯ ಟೋಲ್ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಕುಣಿಗಲ್ ಬೈಪಾಸ್ ಬಳಿ ಸುಮಾರು 25 ಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪ್ರತಿಭಟನಕಾರರು ಹಾಗೂ ಬಸ್ ಚಾಲಕರ ನಡುವೆ ಮಾತಿನ ಚಕಮುಖಿ ನಡೆದು ಓರ್ವ ನಿರ್ವಾಹಕನಿಗೆ ಥಳಿಸಿರುವ ಘಟನೆ ಕೂಡ ನಡೆದಿದೆ. ಹೀಗಾಗಿ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಕೆಲಕಾಲ ಪರದಾಡುವಂತಾಗಿತ್ತು.

ಕೂಡಲೇ ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಬಸ್‍ಗಳನ್ನ ಸರ್ವೀಸ್ ರಸ್ತೆಯಲ್ಲಿ ಸಂಚಾರ ಮಾಡುವಂತೆ ಅನುವು ಮಾಡುವಂತೆ ಪ್ರತಿಭಟನಕಾರರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಪಟ್ಟಣ ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.

 

 

Comments

Leave a Reply

Your email address will not be published. Required fields are marked *