ಬಸ್‍ನಲ್ಲೇ ಕಂಡಕ್ಟರ್ ಆತ್ಮಹತ್ಯೆ

ಹುಬ್ಬಳ್ಳಿ: ಬಸ್‍ನಲ್ಲೇ ನಿರ್ವಾಹಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ.

ಅಬ್ಬಾಸ್ ಅಲಿ ಬಸ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿರ್ವಾಹಕ. ಅಬ್ಬಾಸ್ ಅಲಿ ಬಸವಕಲ್ಯಾಣ ಡಿಪೋ ವಿಭಾಗದ ನಿರ್ವಾಹಕರಾಗಿದ್ದು, ಬುಧವಾ ರಾತ್ರಿ ಬಸವಕಲ್ಯಾಣದಿಂದ ಹುಬ್ಬಳ್ಳಿಗೆ ಆಗಮಿಸಿದ್ದರು. ರಾತ್ರಿ ಊಟ ಮಗಿಸಿಕೊಂಡು ಬಸ್‍ನಲ್ಲಿ ಚಾಲಕ ಹಾಗೂ ನಿರ್ವಾಹಕ ಇಬ್ಬರೂ ಮಲಗಿದ್ದರು. ಚಾಲಕ ಮಲಗಿದ ನಂತರ ಅಬ್ಬಾಸ್ ಅಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ ಬಸ್ ಚಾಲಕ ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಡಿಸಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *