ರಾಮನಗರ: ಧರಂ ಸಿಂಗ್ ಸಾವಿನ ವಿಚಾರ ಗೊತ್ತಿದ್ರೂ ಕಾಂಗ್ರೆಸ್‍ನಲ್ಲಿ ಸಂಭ್ರಮಾಚರಣೆ

ರಾಮನಗರ: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂ ಸಿಂಗ್ ನಿಧನದ ನಡುವೆಯೂ ರಾಮನಗರ ಜಿಲ್ಲಾ ಕಾಂಗ್ರೆಸ್‍ನಲ್ಲಿ ಮಾತ್ರ ಪದಗ್ರಹಣ ಸಂಭ್ರಮಾಚರಣೆ ನಡೆಯುತ್ತಿದೆ.

ಇಂದು ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯುತ್ತಿತ್ತು. ಧರಂ ಸಿಂಗ್ ನಿಧನದ ಸುದ್ದಿ ತಿಳಿದ ಬಳಿಕವೂ ಕಾಂಗ್ರೆಸ್‍ನ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಪದಗ್ರಹಣ ಕಾರ್ಯಕ್ರಮ ನಡೆಸಿದ್ದಾರೆ.

ಸಮಾರಂಭದಲ್ಲಿ ಮಾಜಿ ಶಾಸಕ ಹಾಗೂ ಹಾಲಿ ಎಂಎಲ್‍ಸಿಗಳಾದ ಸಿ.ಎಂ.ಲಿಂಗಪ್ಪ, ರವಿ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿಯಹುಲ್ಲಾ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ.

ಕಾರ್ಯಕ್ರಮ ಆರಂಭವಾದ ನಂತರ ಮಾಜಿ ಮುಖ್ಯಮಂತ್ರಿಗಳ ಸಾವಿನ ಸುದ್ದಿ ತಿಳಿದಿದೆ. ಕೊನೆಯ ಗಳಿಗೆಯಲ್ಲಿ ಕಾರ್ಯಕ್ರಮವನ್ನು ರದ್ದು ಮಾಡಲು ಆಗಲಿಲ್ಲ. ಒಂದು ವೇಳೆ ಪದಗ್ರಹಣವನ್ನು ಮುಂದೂಡಿದರೆ 15 ದಿನಗಳ ಮುಂದೂಡಬೇಕಾಗುತ್ತದೆ ಎಂದು ಎಂಎಲ್‍ಸಿ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ.

 

 

Comments

Leave a Reply

Your email address will not be published. Required fields are marked *