ಜಿಲ್ಲಾಧ್ಯಕ್ಷರ ಎದುರೇ ಕೈ-ಕೈ ಮಿಲಾಯಿಸಿದ `ಕೈ’ ಕಾರ್ಯಕರ್ತರು!

ಚಿಕ್ಕಮಗಳೂರು: ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಜಿಲ್ಲಾಧ್ಯಕ್ಷರೆದುರೇ ಕಾಂಗ್ರೆಸ್ ಕಾರ್ಯಕರ್ತರು ಕೈ-ಕೈ ಮಿಲಾಯಿಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಇಂದು ನಡೆದಿದೆ.

ಕಡೂರಿನ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಆಗಮಿಸಿದ್ದ ಜಿಲ್ಲಾಧ್ಯಕ್ಷ ಡಾ. ವಿಜಯ್ ಕುಮಾರ್ ಎದುರೇ ಕಾರ್ಯಕರ್ತರು ಹೊಡೆದಾಡಿದ್ದಾರೆ. ಸಭೆಗೆ ಕೆಪಿಸಿಸಿ ಲೀಗಲ್ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ್ ಆಗಮಿಸಿದ್ರು. ಧನಂಜಯ್ ಮುಂಬರೋ ಚುನಾವಣೆಗೆ ಕಡೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯೂ ಕೂಡ. ಅವರಿಗೆ ಸ್ವಾಗತ ನೀಡದ್ದಕ್ಕೆ ತೆಂಗುನಾರು ಮಂಡಳಿ ಮಾಜಿ ಅಧ್ಯಕ್ಷ ಸಿ.ನಂಜಪ್ಪ ಆಕ್ಷೇಪ ವ್ಯಕ್ತಪಡಿಸದರು

ಕೂಡಲೇ ಆಕ್ರೋಶಕ್ಕೊಳಗಾದ ಸ್ಥಳಿಯ ಕಾಂಗ್ರೆಸ್ ಕಾರ್ಯಕರ್ತರು ಅವರು ಕಡೂರಿಗೆ ಏನೂ ಅಲ್ಲ. ಅವರಿಗ್ಯಾಕೆ ಸ್ವಾಗತ. ಚುನಾವಣೆ ಸಂದರ್ಭದಲ್ಲಿ ನಾನು ಆಕಾಂಕ್ಷಿ ಎಂದು ಹತ್ತಾರು ಜನ ಬರ್ತಾರೆ. ಪಕ್ಷಕ್ಕಾಗಿ ದುಡಿದ ಸ್ಥಳೀಯ ಕಾರ್ಯಕರ್ತರ ಏನ್ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಹೊರಗಿನವರಿಗೇನು ಕೆಲಸ ಎಂದೆಲ್ಲ ಪ್ರಶ್ನಿಸಿ ಎಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇಷ್ಟೆಲ್ಲಾ ತನ್ನ ಕಣ್ಮುಂದೆಯೇ ನಡೆಯುತ್ತಿದ್ರು ಮೂಕಪ್ರೇಕ್ಷಕರಾದ ಅಧ್ಯಕ್ಷ ವಿಜಯ್ ಕುಮಾರ್ ಅರ್ಧಕ್ಕೆ ಸಭೆಯಿಂದ ಎದ್ದು ಹೊರನಡೆದಿದರು.

https://www.youtube.com/watch?v=evI_Gu1Md7A&feature=youtu.be

ಇದನ್ನೂ ಓದಿ: ಗಾಂಧಿ ಜಯಂತಿ ವೇಳೆ ಸಚಿವ, ಶಾಸಕರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

https://www.youtube.com/watch?v=iyOiyLIam98

 

Comments

Leave a Reply

Your email address will not be published. Required fields are marked *