ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‍ಗೆ ಜ್ಯೋತಿರಾದಿತ್ಯ ಸಿಂಧಿಯಾ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ್ದಾರೆ.

ಸೋಮವಾರ ತಮ್ಮ ರಾಜೀನಾಮೆಯನ್ನು ಸಿಂಧಿಯಾ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿತ್ತು. ಇದೀಗ ಸಿಂಧಿಯಾ ರಾಜೀನಾಮೆ ಪತ್ರ ಬಹಿರಂಗಗೊಂಡಿದೆ. ಇತ್ತ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗಾಗಿ ಸಿಂಧಿಯಾ ತೆರಳಿದ್ದಾರೆ. ಮತ್ತೊಂದು ಕಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಗಳ ನಿವಾಸ ತಲುಪಿದ್ದಾರೆ.

ಬಿಜೆಪಿ ಸೇರ್ಪಡೆಯಾಗಲು ಸಿಂಧಿಯಾ ತುದಿಗಾಲಿನಲ್ಲಿ ನಿಂತಿದ್ದು, ಕಮಲನಾಥ್ ಸರ್ಕಾರ ಬೀಳಿಸಿದ್ದ ಪ್ರತಿಫಲವಾಗಿ ಬಿಜೆಪಿ ಸಿಂಧಿಯಾರಿಗೆ ರಾಜ್ಯಸಭಾ ಸದಸ್ಯರನ್ನಾಗಿ ಮಾಡುವ ಸಾಧ್ಯತೆಗಳಿವೆ. ಸೋಮವಾರವೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಜೊತೆ ಸಿಂಧಿಯಾ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇದೀಗ ರಾಜೀನಾಮೆ ಅಧಿಕೃತಗೊಳ್ಳುತ್ತಿದ್ದಂತೆ ಬಹಿರಂಗವಾಗಿ ಮೋದಿ ನಿವಾಸಕ್ಕೆ ತೆರಳುತ್ತಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಸಿಂಧಿಯಾ, ಇಂದು ಸಂಜೆ ಬಿಜೆಪಿಯ ಬೈಠಕ್ ನಲ್ಲಿ ಭಾಗವಹಿಸುವ ಮೂಲಕ ಕಮಲದ ಬಾವುಟ ಹಿಡಿಯಲಿದ್ದಾರೆ.

Comments

Leave a Reply

Your email address will not be published. Required fields are marked *