ಪ್ರತಿಭಟನೆ ಮಾಡ್ತೀರೋ ಉದ್ದೇಶ ತಿಳಿಸಿದ ಮಲ್ಲಿಕಾರ್ಜುನ್ ಖರ್ಗೆ

ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರುನಾಡಿನ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ವಿಕಾಸ ಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಪ್ರತಿಭಟನೆ ಮಾಡ್ತೀರೊ ಉದ್ದೇಶವನ್ನು ತಿಳಿಸಿದ್ರು. ನಮ್ಮ ಬಳಿ ಬಹುಮತದ ನಂಬರ್ ಇದ್ರೂ ಸರ್ಕಾರ ರಚನೆಗೆ ನಮಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಯಾವ ರಾಜ್ಯಪಾಲರು ಬಹುಮತ ಸಾಬೀತಿಗೆ 15 ದಿನದ ಅವಕಾಶ ನೀಡಿಲ್ಲ ಅಂತಾ ಆಕ್ರೋಶ ಹೊರ ಹಾಕಿದ್ರು.

ಈ 15 ದಿನದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಹಾಗು ಜೆಡಿಎಸ್ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ್ದೇ ಕಾನೂನು ಬಾಹಿರ ಅಂತಾ ಖರ್ಗೆ ಗುಡುಗಿದರು.

Comments

Leave a Reply

Your email address will not be published. Required fields are marked *